ನವದೆಹಲಿ: ರಾಷ್ಟ್ರೀಯ ಭದ್ರತೆ ನೆಪವೊಡ್ಡಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ದಾಖಲೆಗಳನ್ನು ತಡೆಹಿಡಿಯಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಆದರೆ, ಮಾಹಿತಿಯನ್ನು ಬಹಿರಂಗಪಡಿಸುವುದಕ್ಕಿಂತ ತಡೆಹಿಡಿಯುವುದರಿಂದಲೇ ಹೆಚ್ಚು ಹಾನಿ ಎನ್ನುವುದನ್ನು ಅರ್ಜಿದಾರರು ಸಾಬೀತುಪಡಿಸಬೇಕು ಎಂದು ನ್ಯಾಯಮೂರ್ತಿ ಕೆ.ಎಂ. ಜೋಸೆಫ್ಅವರು ತೀರ್ಪಿನಲ್ಲಿ ಈ ವಿಷಯ ಉಲ್ಲೇಖಿಸಿದ್ದಾರೆ. ಆರ್ಟಿಐ ಬೆಲೆ ಕಟ್ಟಲಾಗದ ಹಕ್ಕನ್ನು ನಾಗರಿಕರಿಗೆ ನೀಡಿದೆ. ಜತೆಗೆ, ಭಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಿ
ಸಲು ನಡೆಯುವ ಹೋರಾಟಕ್ಕೂ ಇದು ಪೂರಕವಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ಸಲ್ಲಿಸಿದ್ದ ತಕರಾರುಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.