ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಬಳಿ ಮೊಬೈಲ್‌ ಗೋಪುರ: ರಾಜ್ಯದ ನಿರ್ಬಂಧಕ್ಕೆ ಆಕ್ಷೇಪ‍

Last Updated 8 ಜುಲೈ 2019, 19:39 IST
ಅಕ್ಷರ ಗಾತ್ರ

ನವದೆಹಲಿ: ಶಾಲೆಗಳು, ಪಾರಂಪರಿಕ ಕಟ್ಟಡಗಳು, ಧಾರ್ಮಿಕ ಸ್ಥಳಗಳ ಸಮೀಪ ಮೊಬೈಲ್‌ ಗೋಪುರಗಳನ್ನುಅಳವಡಿಸಲು ಕರ್ನಾಟಕ ಸರ್ಕಾರ ನಿರ್ಬಂಧ ಹೇರಿರುವುದಕ್ಕೆ ದೂರಸಂಪರ್ಕ ಇಲಾಖೆಯು ಆಕ್ಷೇಪ ವ್ಯಕ್ತಪಡಿಸಿದೆ.

ಮೊಬೈಲ್‌ ಸಂಪರ್ಕಜಾಲವನ್ನು ವಿಸ್ತರಿಸಲು ಕೇಂದ್ರದ ನಿಯಮಗಳಿಗೆ ಪೂರಕವಾಗಿ ನಿಯಮಗಳನ್ನು ಪರಿಷ್ಕರಿಸಬೇಕು ಎಂದು ಮನವಿ ಮಾಡಿದೆ. ಇಲಾಖೆಯ ಕಾರ್ಯದರ್ಶಿ ಅರುಣಾ ಸುಂದರರಾಜನ್‌, ಈ ಸಂಬಂಧ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದ ನಿಯಮಗಳ ಅನುಸಾರ ಶಾಲೆ, ಪಾರಂಪರಿಕ ಕಟ್ಟಡಗಳು, ಧಾರ್ಮಿಕ ಕೇಂದ್ರಗಳ ಬಳಿ ಮೊಬೈಲ್‌ ಗೋಪುರ ಅಳವಡಿಸಲು ಯಾವುದೇ ನಿರ್ಬಂಧವಿಲ್ಲ ಎಂಬುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಗೋಪುರ ಅಳವಡಿಸಲು ನಿಗದಿಪಡಿಸಿರುವ ಶುಲ್ಕವು ಕೇಂದ್ರ ಸರ್ಕಾರ ಸಲಹೆ ಮಾಡಿದ್ದಕ್ಕಿಂತಲೂ 10 ಪಟ್ಟು ಹೆಚ್ಚಿದೆ ಎಂಬುದರ ಬಗ್ಗೆಯೂ ಅವರು ತಕರಾರು ತೆಗೆದಿದ್ದಾರೆ.

ನಿಯಮಗಳ ಪ್ರಕಾರ, ರಾಜ್ಯದಲ್ಲಿ ಕಂಪನಿಗಳು ₹ 15,000ದಿಂದ ₹ 1 ಲಕ್ಷವರೆಗೂ ಶುಲ್ಕ ಪಾವತಿಸಬೇಕು. ಕೇಂದ್ರ ಸರ್ಕಾರದ ಅಧಿಸೂಚನೆ ಅನುಸಾರ ಈ ಶುಲ್ಕ ₹ 10,000 ಎಂದು ಹೇಳಿದ್ದಾರೆ. ಶೀಘ್ರ ನಿಯಮಗಳನ್ನು ಪರಿಷ್ಕರಿಸಬೇಕು ಎಂದೂ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT