ನವದೆಹಲಿ:ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು (ಡಿಎನ್ಇಪಿ) ಶಿಕ್ಷಣ ವ್ಯವಸ್ಥೆಯ ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣವನ್ನು ಖಚಿತಪಡಿಸುವಂತಿದೆ. ಹೀಗಾಗಿ ಅದು ‘ಸ್ವೀಕಾರಾರ್ಹವಲ್ಲ’ ಎಂದುಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಶುಕ್ರವಾರ ಬರೆದ ಪತ್ರದಲ್ಲಿ ಅವರು, ಕರಡು ನೀತಿ ಕುರಿತು ಎಡಪಕ್ಷದ ಅವಲೋಕನಗಳನ್ನು ಹಂಚಿಕೊಂಡಿದ್ದಾರೆ.
ಈ ನೀತಿಯು ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮಾಣ, ಗುಣಮಟ್ಟ ಮತ್ತು ನೀತಿ ನಡುವಿನ ಸಮತೋಲನವನ್ನು ಸಾಧಿಸುವ ಬದಲಿಗೆಕಾರ್ಪೊರೇಟ್ ಪರವಾದ ನಿಲುವನ್ನು ಕರಡು ನೀತಿ ಉತ್ತೇಜಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.