<p><strong>ಶ್ರೀನಗರ: </strong>ಸಿಆರ್ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಚೆಕ್ಪೋಸ್ಟ್ಗೆ ವಾಹನ ನುಗ್ಗಿಸಿ ಪರಾರಿಯಾಗಲು ಅಪರಿಚಿತ ವ್ಯಕ್ತಿಯೊಬ್ಬ ಯತ್ನಿಸಿದ ಘಟನೆ ಜಮ್ಮು–ಕಾಶ್ಮೀರದ ಬುದ್ಗಾಂ ಜಿಲ್ಲೆಯ ಮಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಾಹನದ ಮೇಲೆ ಸಿಆರ್ಪಿಎಫ್ ಯೋಧರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಗಾಯಗೊಂಡಿದ್ದ ಚಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಬುಧವಾರ ಬೆಳಿಗ್ಗೆ 10.45ರ ವೇಳೆಗೆ ವಾಹನವೊಂದು ಚೆಕ್ಪೋಸ್ಟ್ ಬಳಿ ಬರುವುದನ್ನು ಗಮನಿಸಿದ ಸಿಬ್ಬಂದಿ ತಪಾಸಣೆಗಾಗಿ ನಿಲ್ಲುವಂತೆ ಸಂಕೇತ ನೀಡಿದ್ದಾರೆ. ಆದರೆ, ಚಾಲಕ ವಾಹನವನ್ನು ನುಗ್ಗಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಯೋಧರು ಕೆಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ದಾಳಿಯಲ್ಲಿ ಗಾಯಗೊಂಡ ಚಾಲಕನನ್ನು ಮಹ್ರಾಜುದ್ದೀನ್ ಎಂದು ಗುರುತಿಸಲಾಗಿದ್ದು, ಈತ ಶ್ರೀನಗರದ ಮಖಾನಾ ಬೀರ್ವಾ ನಿವಾಸಿಯಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಸಿಆರ್ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಚೆಕ್ಪೋಸ್ಟ್ಗೆ ವಾಹನ ನುಗ್ಗಿಸಿ ಪರಾರಿಯಾಗಲು ಅಪರಿಚಿತ ವ್ಯಕ್ತಿಯೊಬ್ಬ ಯತ್ನಿಸಿದ ಘಟನೆ ಜಮ್ಮು–ಕಾಶ್ಮೀರದ ಬುದ್ಗಾಂ ಜಿಲ್ಲೆಯ ಮಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಾಹನದ ಮೇಲೆ ಸಿಆರ್ಪಿಎಫ್ ಯೋಧರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಗಾಯಗೊಂಡಿದ್ದ ಚಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಬುಧವಾರ ಬೆಳಿಗ್ಗೆ 10.45ರ ವೇಳೆಗೆ ವಾಹನವೊಂದು ಚೆಕ್ಪೋಸ್ಟ್ ಬಳಿ ಬರುವುದನ್ನು ಗಮನಿಸಿದ ಸಿಬ್ಬಂದಿ ತಪಾಸಣೆಗಾಗಿ ನಿಲ್ಲುವಂತೆ ಸಂಕೇತ ನೀಡಿದ್ದಾರೆ. ಆದರೆ, ಚಾಲಕ ವಾಹನವನ್ನು ನುಗ್ಗಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಯೋಧರು ಕೆಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ದಾಳಿಯಲ್ಲಿ ಗಾಯಗೊಂಡ ಚಾಲಕನನ್ನು ಮಹ್ರಾಜುದ್ದೀನ್ ಎಂದು ಗುರುತಿಸಲಾಗಿದ್ದು, ಈತ ಶ್ರೀನಗರದ ಮಖಾನಾ ಬೀರ್ವಾ ನಿವಾಸಿಯಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>