ಐಜ್ವಾಲ್: ಮಿಜೋರಾಂನಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಉಂಟಾಗಿದ್ದು, ತೀವ್ರತೆ ಪ್ರಮಾಣ ರಿಕ್ಟರ್ ಮಾಪಕದಲ್ಲಿ 5.3ರಷ್ಟು ದಾಖಲಾಗಿದೆ. ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಮುಂಜಾನೆ 4.10ರ ಸುಮಾರಿಗೆ ಭೂಕಂಪವಾಗಿದೆ.ಚಾಂಫಾಯ್ ಜಿಲ್ಲೆಯ ಜೋಖಾವ್ತರ್ನಭಾರತ–ಮ್ಯಾನ್ಮಾರ್ ಗಡಿ ಭಾಗದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 20 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ ಎಂದು ವರದಿಯಾಗಿದೆ.
ಜೋಖಾವ್ತರ್ ಪ್ರಾಂತ್ಯದ ಚರ್ಚ್, ಮನೆ ಸೇರಿದಂತೆ ಹಲವು ಕಟ್ಟಡಗಳಿಗೆ ಹಾನಿ ಉಂಟಾಗಿದೆ. ಅಲ್ಲದೇ ರಸ್ತೆಗಳಲ್ಲೂ ಬಿರುಕು ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂತಹ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧ ಎಂದು ಮಿಜೋರಾಂ ಮುಖ್ಯಮಂತ್ರಿ ಜೋರಾಂಥಾಂಗಾನಿ ಅವರಿಗೆ ಭರವಸೆ ನೀಡಿದ್ದಾರೆ.
Spoke to the Chief Minister of Mizoram, Shri @ZoramthangaCM Ji on the situation in the wake of the earthquake there. Assured all possible support from the Centre.