ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯಲ್ಲಿ ಉಪಚುನಾವಣೆ ರದ್ದುಪಡಿಸಿರುವುದಾಗಿ ಹೇಳಲಾಗಿದೆ. ಡಿಎಂಕೆ ನಾಯಕ ಎಂ.ಕರುಣಾನಿಧಿಯವರು ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರಕ್ಕೆ ಅವರ ನಿಧನದ ನಂತರ ಉಪಚುನಾವಣೆ ನಿಗದಿಯಾಗಿತ್ತು. ಹಿಂದಿನ ವರ್ಷದ ನವೆಂಬರ್ನಲ್ಲಿ ಅಪ್ಪಳಿಸಿದ ಗಾಜ ಚಂಡಮಾರುತದಿಂದ ಈ ಕ್ಷೇತ್ರದ ಜನರು ಸಂತ್ರಸ್ತರಾಗಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿರುವುದರಿಂದ ಸದ್ಯಕ್ಕೆ ಉಪಚುನಾವಣೆ ಮುಂದೂಡಬೇಕೆಂದು ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.