ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಈ ನಿರ್ಧಾರ ಕೈಗೊಂಡಿದೆ.
ಏಪ್ರಿಲ್ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗುತ್ತಿದೆ. ತೆರವಾಗಲಿರುವ ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ಫೆ. 25ರಂದು ಚುನಾವಣೆ ಘೋಷಿಸಿತ್ತು. ಮಾರ್ಚ್ 6ರಿಂದ ಅಧಿಸೂಚನೆ ಜಾರಿಯಾಗಿತ್ತು.
ಚುನಾವಣೆಗೆ ಇನ್ನೇನು ಎರಡು ದಿನಗಳು ಬಾಕಿ ಉಳಿದಿರುವಾಗಲೇ ಚುನಾವಣೆ ಆಯೋಗ ಮುಂದೂಡಿಕೆ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಈಗಾಗಲೇ ಸರಿಸುಮಾರು 500 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ.