ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 26ರಂದು ರಾಜ್ಯಸಭೆಯ 55 ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆ ಮುಂದಕ್ಕೆ

Last Updated 24 ಮಾರ್ಚ್ 2020, 6:05 IST
ಅಕ್ಷರ ಗಾತ್ರ

ನವದೆಹಲಿ: ಇದೇ 26ರಂದು ನಡೆಯಬೇಕಿದ್ದ ರಾಜ್ಯಸಭೆ ಚುನಾವಣೆಯನ್ನು ಕೇಂದ್ರ ಚುನಾವಣೆ ಆಯೋಗ ಮುಂದೂಡಿದಿದೆ.

ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಏಪ್ರಿಲ್‌ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗುತ್ತಿದೆ. ತೆರವಾಗಲಿರುವ ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ಫೆ. 25ರಂದು ಚುನಾವಣೆ ಘೋಷಿಸಿತ್ತು. ಮಾರ್ಚ್ 6ರಿಂದ ಅಧಿಸೂಚನೆ ಜಾರಿಯಾಗಿತ್ತು.

ಚುನಾವಣೆಗೆ ಇನ್ನೇನು ಎರಡು ದಿನಗಳು ಬಾಕಿ ಉಳಿದಿರುವಾಗಲೇ ಚುನಾವಣೆ ಆಯೋಗ ಮುಂದೂಡಿಕೆ ನಿರ್ಧಾರ ಕೈಗೊಂಡಿದೆ.

ದೇಶದಲ್ಲಿ ಈಗಾಗಲೇ ಸರಿಸುಮಾರು 500 ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT