<p><strong>ನವದೆಹಲಿ:</strong> ಕೊರೊನಾ ವೈರಸ್ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ದೇಶದ ಜನರು ಹಾಗೂ ದೇಶದ ಆರ್ಥಿಕ ವ್ಯವಸ್ಥೆ ಸರ್ವನಾಶವಾಗುತ್ತದೆ. ದೇಶದಲ್ಲಿ ಇಷ್ಟೊಂದು ಅನಾಹುತ ಸಂಭವಿಸಿದರೂ ಏನೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಮಂಕು ಕವಿದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿನಡೆಸಿದ್ದಾರೆ.</p>.<p>ಗುರುವಾರ ತಾವು ಮಾಡಿದ್ದ ಒಂದು ಟ್ವೀಟ್ ಅನ್ನೇ ಶುಕ್ರವಾರವೂ ಟ್ಯಾಗ್ ಮಾಡಿದ್ದು, ಕೊರೊನಾ ವೈರಸ್ ದೇಶದಾದ್ಯಂತ ಬೃಹದಾಕಾರವಾಗಿ ಕಾಣಿಸಿಕೊಂಡಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳದಿದ್ದರೆ, ಭಾರತದ ಅರ್ಥವ್ಯವಸ್ಥೆ ಸರ್ವನಾಶವಾಗುತ್ತದೆ ಎಂದು ಹೇಳಿದ್ದಾರೆ.</p>.<p>ಇದು ನಮ್ಮ ಜನರಿಗೆ ಹಾಗೂ ನಮ್ಮ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.</p>.<p>ಮುಂಬೈ ಷೇರು ಪೇಟೆಯಲ್ಲಿ ಕೇವಲ 15 ನಿಮಿಷದಲ್ಲಿ 12 ಲಕ್ಷ ಕೋಟಿ ರೂ ನಷ್ಟ ಸಂಭವಿಸಿದೆ. ಬಂಡವಾಳ ಹೂಡಿಕೆದಾರರಲ್ಲಿ ತೀವ್ರ ಅಘಾತ ಉಂಟುಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ದೇಶದ ಜನರು ಹಾಗೂ ದೇಶದ ಆರ್ಥಿಕ ವ್ಯವಸ್ಥೆ ಸರ್ವನಾಶವಾಗುತ್ತದೆ. ದೇಶದಲ್ಲಿ ಇಷ್ಟೊಂದು ಅನಾಹುತ ಸಂಭವಿಸಿದರೂ ಏನೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಮಂಕು ಕವಿದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿನಡೆಸಿದ್ದಾರೆ.</p>.<p>ಗುರುವಾರ ತಾವು ಮಾಡಿದ್ದ ಒಂದು ಟ್ವೀಟ್ ಅನ್ನೇ ಶುಕ್ರವಾರವೂ ಟ್ಯಾಗ್ ಮಾಡಿದ್ದು, ಕೊರೊನಾ ವೈರಸ್ ದೇಶದಾದ್ಯಂತ ಬೃಹದಾಕಾರವಾಗಿ ಕಾಣಿಸಿಕೊಂಡಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳದಿದ್ದರೆ, ಭಾರತದ ಅರ್ಥವ್ಯವಸ್ಥೆ ಸರ್ವನಾಶವಾಗುತ್ತದೆ ಎಂದು ಹೇಳಿದ್ದಾರೆ.</p>.<p>ಇದು ನಮ್ಮ ಜನರಿಗೆ ಹಾಗೂ ನಮ್ಮ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.</p>.<p>ಮುಂಬೈ ಷೇರು ಪೇಟೆಯಲ್ಲಿ ಕೇವಲ 15 ನಿಮಿಷದಲ್ಲಿ 12 ಲಕ್ಷ ಕೋಟಿ ರೂ ನಷ್ಟ ಸಂಭವಿಸಿದೆ. ಬಂಡವಾಳ ಹೂಡಿಕೆದಾರರಲ್ಲಿ ತೀವ್ರ ಅಘಾತ ಉಂಟುಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>