ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಅರ್ಥವ್ಯವಸ್ಥೆ ಸರ್ವನಾಶ: ರಾಹುಲ್ ಗಾಂಧಿ

Last Updated 13 ಮಾರ್ಚ್ 2020, 6:30 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌‌ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ದೇಶದ ಜನರು ಹಾಗೂ ದೇಶದ ಆರ್ಥಿಕ ವ್ಯವಸ್ಥೆ ಸರ್ವನಾಶವಾಗುತ್ತದೆ. ದೇಶದಲ್ಲಿ ಇಷ್ಟೊಂದು ಅನಾಹುತ ಸಂಭವಿಸಿದರೂ ಏನೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಮಂಕು ಕವಿದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿನಡೆಸಿದ್ದಾರೆ.

ಗುರುವಾರ ತಾವು ಮಾಡಿದ್ದ ಒಂದು ಟ್ವೀಟ್ ಅನ್ನೇ ಶುಕ್ರವಾರವೂ ಟ್ಯಾಗ್ ಮಾಡಿದ್ದು, ಕೊರೊನಾ ವೈರಸ್ ದೇಶದಾದ್ಯಂತ ಬೃಹದಾಕಾರವಾಗಿ ಕಾಣಿಸಿಕೊಂಡಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳದಿದ್ದರೆ, ಭಾರತದ ಅರ್ಥವ್ಯವಸ್ಥೆ ಸರ್ವನಾಶವಾಗುತ್ತದೆ ಎಂದು ಹೇಳಿದ್ದಾರೆ.

ಇದು ನಮ್ಮ ಜನರಿಗೆ ಹಾಗೂ ನಮ್ಮ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಮುಂಬೈ ಷೇರು ಪೇಟೆಯಲ್ಲಿ ಕೇವಲ 15 ನಿಮಿಷದಲ್ಲಿ 12 ಲಕ್ಷ ಕೋಟಿ ರೂ ನಷ್ಟ ಸಂಭವಿಸಿದೆ. ಬಂಡವಾಳ ಹೂಡಿಕೆದಾರರಲ್ಲಿ ತೀವ್ರ ಅಘಾತ ಉಂಟುಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT