‘ಜಮ್ಷೆಡ್ಪುರದಲ್ಲಿ 350ಕ್ಕೂ ಹೆಚ್ಚು ಕೊಟ್ಟಿಗೆಗಳಿದ್ದು, ಇವೆಲ್ಲವೂ ಅಕ್ರಮವಾದವು. ಸಗಣಿ ವಿಲೇವಾರಿಗೆ ಈ ಕೊಟ್ಟಿಗೆಗಳಲ್ಲಿ ಯಾವುದೇ ರೀತಿಯ ವ್ಯವಸ್ಥೆ ಇಲ್ಲ. ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಸಗಣಿಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು, ಕೊಟ್ಟಿಗೆಗಳು ಹಾಗೂ ಹಸುಗಳ ಮಾಲೀಕರ ವಿರುದ್ಧ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದವು’ ಎಂದು ಪಾಂಡೆ ತಿಳಿಸಿದ್ದಾರೆ.