ಮುಜಾಫರ್ನಗರ:ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಸಲಿಂಗಕಾಮಕ್ಕೆ ಬಳಸಿಕೊಂಡ ವರದಿಯಾಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಾಲಕ ಆಡುಗಳನ್ನು ಕಾಡಿನಲ್ಲಿ ಮೇಯಿಸಲು ಹೋದಾಗ ಈ ಕೃತ್ಯ ನಡೆದಿದೆಎಂದು ಬಾಲಕನ ಪೋಷಕರು ದೂರು ನೀಡಿದ್ದಾರೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.
ಆರೋಪಿ 23 ವರ್ಷದವನಾಗಿದ್ದು, ಆತನ ಬಂಧನಕ್ಕೆ ಶೋಧ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.