ಆಯೋಗದ ಶಿಫಾರಸು ಸೋಮವಾರ ರಾತ್ರಿ ರಾಷ್ಟ್ರಪತಿ ಭವನ ತಲುಪಿದೆ. ಇದನ್ನು ಕೇಂದ್ರ ಕಾನೂನು ಸಚಿವಾಲಯದ ಜತೆಗೂ ಹಂಚಿಕೊಂಡು ಅಭಿಪ್ರಾಯ ಕೇಳಲಾಗುವುದು. ಆಯೋಗದ ಪ್ರಸ್ತಾಪವನ್ನು ರಾಷ್ಟ್ರಪತಿಗಳು ಅಂಗೀಕರಿಸುವ ಸಾಧ್ಯತೆಯೇ ಹೆಚ್ಚಿದೆ. ಒಂದು ವೇಳೆ ರಾಷ್ಟ್ರಪತಿಗಳು ಅಧಿಸೂಚನೆ ಹೊರಡಿಸಿದಲ್ಲಿ, ಈ ಬಾರಿ ಚುನಾವಣೆ ರದ್ದಾದ ಮೊದಲ ಕ್ಷೇತ್ರವಾಗಲಿದೆ ವೆಲ್ಲೋರ್ಎಂದು ವರದಿ ತಿಳಿಸಿದೆ.