ಪಣಜಿ: ‘ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ನ (ಕೆಆರ್ಸಿಎಲ್) ರೈಲು ಮಾರ್ಗದ ವಿದ್ಯುದ್ದೀಕರಣವು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ಶುಕ್ರವಾರ ತಿಳಿಸಿದ್ದಾರೆ.
ರೈಲು ವಿದ್ಯುದ್ದೀಕರಣದಿಂದ ಡೀಸೆಲ್ ಎಂಜಿನ್ಗಳ ಬಳಕೆ ಇಲ್ಲದಾಗುತ್ತದೆ. ಇದರಿಂದ ಮಾಲಿನ್ಯ ನಿಯಂತ್ರಿಸಬಹುದು. ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ರಾಜ್ಯ ಸರ್ಕಾರದ ಸಂಕಲ್ಪಕ್ಕೆ ರೈಲ್ವೆ ಇಲಾಖೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ.