ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ ಸಿಂಗ್‌ ಸೇರ್ಪಡೆ: ಲಾಡ್‌ ವಿರುದ್ಧ ಕಿಡಿ

Last Updated 8 ಫೆಬ್ರುವರಿ 2018, 8:54 IST
ಅಕ್ಷರ ಗಾತ್ರ

ಹೊಸಪೇಟೆ: ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ ಸ್ಥಳೀಯ ಕಾಂಗ್ರೆಸ್‌ ಮುಖಂಡ ದೀಪಕ್‌ ಸಿಂಗ್‌,  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ವಿರುದ್ಧ ಶುಕ್ರವಾರ ಇಲ್ಲಿ ಹರಿಹಾಯ್ದರು.

ಫೆ.10ರಂದು ಇಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ‘25–30 ವರ್ಷಗಳಿಂದ ಪಕ್ಷವನ್ನು ಕಟ್ಟಿ ಬೆಳೆಸಿದವರನ್ನು ಕೈಬಿಟ್ಟು, ಈಗ ಏಕಾಏಕಿ ಆನಂದ ಸಿಂಗ್‌ ಅವರನ್ನು ಕರೆತಂದು ಮಗ್ಗುಲಲ್ಲಿ ಕೂರಿಸಿಕೊಂಡಿದ್ದು ಸರಿಯಲ್ಲ. ನೀವು ತಪ್ಪು ಮಾಡುತ್ತಿದ್ದೀರಿ’ ಎಂದು ಕಿಡಿ ಕಾರಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಲಾಡ್‌, ‘ಈ ವಿಷಯವನ್ನು ಹೈಕಮಾಂಡ್‌ಗೆ ಕೇಳಿ’ ಎಂದರು. ಈ ಹಂತದಲ್ಲಿ ಪರಸ್ಪರ ಮಾತು ಬೆಳೆದು ಇಬ್ಬರೂ ತೋಳೇರಿಸಿ ನಿಂತಾಗ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ. ಶಿವಯೋಗಿ ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

ಆ ಬಳಿಕ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದ ಸಚಿವ ಲಾಡ್‌, ‘ನಿಮ್ಮ ಸ್ಥಳದಲ್ಲಿ ನಾನಿದ್ದರೂ ಇದನ್ನೇ ಮಾಡುತ್ತಿದ್ದೆ. ಹೈಕಮಾಂಡ್‌ ನಿರ್ಧಾರ ಆಗಿರುವುದರಿಂದ ಹೊಂದಿಕೊಂಡು ಹೋಗೋಣ’ ಎಂದು ಮನವಿ ಮಾಡಿದರು.

ಸಭೆಯಲ್ಲಿದ್ದ ಆನಂದ್‌ ಸಿಂಗ್‌ ಮಾತನಾಡಿ, ‘ಇಲ್ಲಿ ವ್ಯಕ್ತಿಗತ ಮಾತನಾಡುವುದು ಬೇಡ. ನಾನು ಸುಮ್ಮನೆ ಕುಳಿತಿದ್ದೇನೆ ಎಂದರೆ ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಬೇಕಿಲ್ಲ. ನಾನು ಕಾಂಗ್ರೆಸ್‌ನಲ್ಲಿ ಶ್ರಮ ವಹಿಸಿ ಕೆಲಸ ಮಾಡಿ, ಫಲ ಕೇಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT