ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧಗಾಳಿ ಕಾರ್ಯಕ್ರಮ: ರಾಜ್ಯದ ನಾಲ್ಕು ನಗರ ಆಯ್ಕೆ

Last Updated 10 ಜನವರಿ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ನಾಲ್ಕು ನಗರಗಳೂ ಸೇರಿ ದೇಶದ 102 ನಗರಗಳಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಗುರುವಾರ ಚಾಲನೆ ನೀಡಿದೆ.

ಬೆಂಗಳೂರು, ದಾವಣಗೆರೆ, ಕಲಬುರ್ಗಿ ಮತ್ತು ಹುಬ್ಬಳ್ಳಿ–ಧಾರವಾಡ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿವೆ.

ಈ 102 ನಗರಗಳಲ್ಲಿ 43 ‘ಸ್ಮಾರ್ಟ್‌ ಸಿಟಿ’ಗಳೂ ಸೇರಿವೆ.2017ರಲ್ಲಿ ಈ ನಗರಗಳಲ್ಲಿ ದಾಖಲಾಗಿದ್ದ ಪಿಎಂ 2.5 ಮತ್ತು ಪಿಎಂ 10 ಮಾಲಿನ್ಯಕಾರಕ ಕಣಗಳ ಸಂಖ್ಯೆಯಲ್ಲಿ ಶೇ 20–30ರಷ್ಟು ಕಡಿಮೆ ಮಾಡಲು ಈ ಕಾರ್ಯಕ್ರಮ ರೂಪಿಸಲಾಗಿದೆ. 2019ರಿಂದ 2024ರವರೆಗೆ ಕಾರ್ಯಕ್ರಮ ಚಾಲ್ತಿಯಲ್ಲಿ ಇರಲಿದೆ. ಕೇಂದ್ರ ಪರಿಸರ ಸಚಿವಾಲಯ ಇದರ ಮೇಲ್ವಿಚಾರಣೆ ನಡೆಸಲಿದೆ.

ಐದು ವರ್ಷಗಳ ಈ ಕಾರ್ಯಕ್ರಮಕ್ಕೆ ₹ 2,000 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಈಗ ₹ 300 ಕೋಟಿ ಮಂಜೂರು ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.\

ದೂಳು ನಿಯಂತ್ರಣಕ್ಕೆ ಕ್ರಮಗಳು
ಈ ನಗರಗಳಲ್ಲಿ ದೂಳಿನ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ವಾಯುಮಾಲಿನ್ಯವನ್ನು ನಿಯಂತ್ರಿಸಲು ಯೋಜನೆ ರೂಪಿಸಲಾಗಿದೆ. ಆಯಾ ನಗರಗಳಿಗೇ ವಿಶಿಷ್ಟವಾದ ಕಾರ್ಯಯೋಜನೆ ರೂಪಿಸಬೇಕಿದೆ. ಆದರೆ ಪ್ರಮುಖವಾಗಿ ಈ ಕೆಳಕಂಡ ಕ್ರಮಗಳನ್ನು ಸೂಚಿಸಲಾಗಿದೆ

* ರಸ್ತೆಯಲ್ಲಿ ದೂಳು ಏಳದಂತೆ ನೀರು ಚಿಮುಕಿಸುವುದು
* ನಿರ್ಮಾಣ–ಕಾಮಗಾರಿ ಸ್ಥಳಗಳಲ್ಲಿ ನೀರು ಚಿಮುಕಿಸುವುದು
* ಸಂಸ್ಕರಿಸಿದ ಕೊಳಚೆ ನೀರನ್ನು ಇದಕ್ಕಾಗಿ ಬಳಸುವುದು
* ರಸ್ತೆಯ ಕಸ ಗುಡಿಸಲು ಯಂತ್ರಗಳನ್ನು ಬಳಸುವುದು
* ಎಲ್ಲಾ ರಸ್ತೆಗಳಲ್ಲಿ ಗಿಡ–ಮರಗಳನ್ನು ಬೆಳೆಸುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT