ಇದರ ಬೆನ್ನಲ್ಲೇ ಪ್ರಕಾಶ್ ಜಾವಡೇಕರ್ ಅವರು, ‘ದೆಹಲಿಯಲ್ಲಿ ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೂ, ದೆಹಲಿ ಸರ್ಕಾರವು ತನ್ನ ಪಾಲಿನ ಹಣ ನೀಡಿರಲಿಲ್ಲ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರವಷ್ಟೇ ದೆಹಲಿ ಸರ್ಕಾರ ಎಚ್ಚೆತ್ತುಕೊಂಡಿತು. ಈ ರಸ್ತೆಯ ನಿರ್ಮಾಣದ ನಂತರ ಸರಕು ಸಾಗಣೆ ವಾಹನಗಳು ದೆಹಲಿ ಪ್ರವೇಶಿಸುವುದು ಕಡಿಮೆಯಾಯಿತು. ಮಾಲಿನ್ಯ ನಿಯಂತ್ರಿಸಲು ದೆಹಲಿ ಸರ್ಕಾರವು ರಚನಾತ್ಮಕವಾಗಿ ಯೋಚನೆ ಮಾಡಬೇಕು’ ಎಂದು ಹೇಳಿದರು.