<p><strong>ನವದೆಹಲಿ :</strong> ‘ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ಸಿಂಗ್, ರಾಷ್ಟ್ರಪತಿಗೆ ದಯಾ ಅರ್ಜಿ ಸಲ್ಲಿಸಿದ್ದು, ಜ. 22ರಂದು ಅಪರಾಧಿಗಳನ್ನು ಗಲ್ಲಿಗೇರಿಸಬಾರದು’ ಎಂದು ಹೈಕೋರ್ಟ್ಗೆ ದೆಹಲಿ ಸರ್ಕಾರ ಬುಧವಾರ ತಿಳಿಸಿದೆ.</p>.<p>ಹೀಗಾಗಿ ಅಪರಾಧಿಗಳನ್ನು ನೇಣುಗಂಬಕ್ಕೇರಿಸುವ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ.</p>.<p>ನ್ಯಾಯಮೂರ್ತಿಗಳಾದ ಮನ ಮೋಹನ್ ಮತ್ತು ಸಂಗೀತಾ ಧಿಂಗ್ರಾ ಸೆಹಗಲ್ ಅವರನ್ನು ಒಳಗೊಂಡ ಪೀಠಕ್ಕೆ ಈ ಮಾಹಿತಿ ನೀಡಿರುವದೆಹಲಿ ಸರ್ಕಾರ, ‘ಅಪರಾಧಿ ಸಲ್ಲಿಸಿರುವ ದಯಾ ಅರ್ಜಿ ವಜಾಗೊಂಡ ನಂತರವೂ ಆತನನ್ನು ಗಲ್ಲಿಗೇರಿಸುವ ಮೊದಲು 14 ದಿನಗಳ ಕಾಲಾವಕಾಶದ ನೋಟಿಸ್ ನೀಡಬೇಕು’ ಎಂದು<br />ಹೇಳಿದೆ.</p>.<p>ಈ ನಡುವೆ, ‘ಮುಕೇಶ್ಸಿಂಗ್ನ ಅರ್ಜಿಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಕಳುಹಿಸಿದ್ದು, ಅರ್ಜಿಯನ್ನು ತಿರಸ್ಕರಿಸುವಂತೆ ಕೋರಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.</p>.<p><strong>ಅರ್ಜಿ ತಿರಸ್ಕರಿಸಿದ ದೆಹಲಿ ಕೋರ್ಟ್:</strong> ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾರಿಗೊಳಿಸಿರುವ ಡೆತ್ ವಾರಂಟ್ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದ್ದು, ಅಪರಾಧಿ ಮುಕೇಶ್ ಸಿಂಗ್ಗೆ ವಿಚಾರಣಾಧೀನ ಕೋರ್ಟ್ ಮೊರೆ ಹೋಗಲು ತಿಳಿಸಿದೆ.</p>.<p><strong>ಖಂಡನೆ: </strong>ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವಲ್ಲಿ ದೆಹಲಿ ಸರ್ಕಾರ ವಿಳಂಬ ತಂತ್ರ ಅನುಸರಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಖಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ‘ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ಸಿಂಗ್, ರಾಷ್ಟ್ರಪತಿಗೆ ದಯಾ ಅರ್ಜಿ ಸಲ್ಲಿಸಿದ್ದು, ಜ. 22ರಂದು ಅಪರಾಧಿಗಳನ್ನು ಗಲ್ಲಿಗೇರಿಸಬಾರದು’ ಎಂದು ಹೈಕೋರ್ಟ್ಗೆ ದೆಹಲಿ ಸರ್ಕಾರ ಬುಧವಾರ ತಿಳಿಸಿದೆ.</p>.<p>ಹೀಗಾಗಿ ಅಪರಾಧಿಗಳನ್ನು ನೇಣುಗಂಬಕ್ಕೇರಿಸುವ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ.</p>.<p>ನ್ಯಾಯಮೂರ್ತಿಗಳಾದ ಮನ ಮೋಹನ್ ಮತ್ತು ಸಂಗೀತಾ ಧಿಂಗ್ರಾ ಸೆಹಗಲ್ ಅವರನ್ನು ಒಳಗೊಂಡ ಪೀಠಕ್ಕೆ ಈ ಮಾಹಿತಿ ನೀಡಿರುವದೆಹಲಿ ಸರ್ಕಾರ, ‘ಅಪರಾಧಿ ಸಲ್ಲಿಸಿರುವ ದಯಾ ಅರ್ಜಿ ವಜಾಗೊಂಡ ನಂತರವೂ ಆತನನ್ನು ಗಲ್ಲಿಗೇರಿಸುವ ಮೊದಲು 14 ದಿನಗಳ ಕಾಲಾವಕಾಶದ ನೋಟಿಸ್ ನೀಡಬೇಕು’ ಎಂದು<br />ಹೇಳಿದೆ.</p>.<p>ಈ ನಡುವೆ, ‘ಮುಕೇಶ್ಸಿಂಗ್ನ ಅರ್ಜಿಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಕಳುಹಿಸಿದ್ದು, ಅರ್ಜಿಯನ್ನು ತಿರಸ್ಕರಿಸುವಂತೆ ಕೋರಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.</p>.<p><strong>ಅರ್ಜಿ ತಿರಸ್ಕರಿಸಿದ ದೆಹಲಿ ಕೋರ್ಟ್:</strong> ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾರಿಗೊಳಿಸಿರುವ ಡೆತ್ ವಾರಂಟ್ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದ್ದು, ಅಪರಾಧಿ ಮುಕೇಶ್ ಸಿಂಗ್ಗೆ ವಿಚಾರಣಾಧೀನ ಕೋರ್ಟ್ ಮೊರೆ ಹೋಗಲು ತಿಳಿಸಿದೆ.</p>.<p><strong>ಖಂಡನೆ: </strong>ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವಲ್ಲಿ ದೆಹಲಿ ಸರ್ಕಾರ ವಿಳಂಬ ತಂತ್ರ ಅನುಸರಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಖಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>