ಕಾರ್ಯನಿರ್ವಾಹಕ ದಂಡಾಧಿಕಾರಿ ಬಳಿ ದಾಖಲಾಗುವ ಖಾಸಗಿ ದೂರುಗಳ ಬಗ್ಗೆ ಸ್ವತಃ ದಂಡಾಧಿಕಾರಿ ಆಡಳಿತಾತ್ಮಕ ತನಿಖೆ ನಡೆಸಿ, ಎಫ್ಐಆರ್ ದಾಖಲಿಸಿಕೊಳ್ಳಲು ಮಾತ್ರ ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯಲ್ಲಿ (ಸಿಆರ್ಪಿಸಿ) ಅವಕಾಶವಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಕಾನ್ಪುರದ ಛತ್ರಪತಿ ಸಾಹುಜಿ ಮಹಾರಾಜ್ ಕಾಲೇಜ್ ವಿರುದ್ಧ ಅದೇ ಕಾಲೇಜಿನ ಕಾನೂನು ವಿದ್ಯಾರ್ಥಿನಿಯೊಬ್ಬಳು ಜನವರಿಯಲ್ಲಿ ಉತ್ತರ ಪ್ರದೇಶದ ಉನ್ನಾವ್ ಉಪ ವಿಭಾಗೀಯ ದಂಡಾಧಿಕಾರಿ ಬಳಿ ದೂರು ದಾಖಲಿಸಿದ್ದರು.