ರೈತರು ಬೆಳೆದ ತರಕಾರಿ ಸೇರಿದಂತೆ ಎಲ್ಲಾ ಉತ್ಪನ್ನಗಳನ್ನು ತಮ್ಮ ಮನೆಗಳ ಮುಂದೆ ಮಾರಾಟ ಮಾಡಲು ಯತ್ನಿಸಬೇಕು ಎಂದು ತಿಳಿಸಿದ ತೊಮರ್, ರೈತರಿಗೆ ಲಾಕ್ಡೌನ್ ಸಂದರ್ಭದಲ್ಲಿ ಯಾವ ರೀತಿಯ ಸಹಾಯ ಮಾಡಲಾಗಿದೆ ಎಂದು ಪರಿಶೀಲನೆ ನಡೆಸಿದರು. ಅಲ್ಲದೆ, ರೈತರು ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ನಿಯಂತ್ರಣಕೊಠಡಿ (ಕಂಟ್ರೋಲ್ ರೂಂ) ತೆರೆಯುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.