ಮುಂಬೈ:ಇಲ್ಲಿನ ಘಾಟ್ಕೊಪರ್ ಉಪನಗರದ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ.
ಮನೋಜ್ ದುಬೆ (45) ಮೃತರು. ಅವರು ರಾಜಕೀಯ ಬೆಳವಣಿಗೆ ಕುರಿತು ಫೇಸ್ಬುಕ್ನಲ್ಲಿ ಮಾಡಿದ ಪೋಸ್ಟ್ ಈ ಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
‘ರಾಜಕೀಯ ದ್ವೇಷದಿಂದ ಈ ಹತ್ಯೆ ನಡೆದಿದೆ. ಇದರಲ್ಲಿ ಬಿಜೆಪಿ ಕೈವಾಡವಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಅಶೋಕ್ ಚವಾಣ್ ಆರೋಪಿಸಿದ್ದಾರೆ.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದು ಕಾಂಗ್ರೆಸ್ನ ಕಾರ್ಯಕರ್ತನ ಹತ್ಯೆ ಮಾತ್ರವಲ್ಲ, ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.