ನವದೆಹಲಿ: ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಾಗೂ ದ್ವೇಷಭಾಷಣ ಹರಡುವುದನ್ನು ತಡೆಗಟ್ಟುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆದೆಹಲಿ ಹೈಕೋರ್ಟ್ ಬುಧವಾರ ಸೂಚಿಸಿದೆ.
ಫೇಸ್ಬುಕ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣ ಹಾಗೂ ಆನ್ಲೈನ್ ವೇದಿಕೆಗಳ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದಕ್ಕೆ ತಡೆ ನೀಡುವಂತೆ ಕೋರಿ ಆರ್ಎಸ್ಎಸ್ನೊಂದಿಗೆ ಗುರುತಿಸಿಕೊಂಡಿದ್ದ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅರ್ಜಿ ಸಲ್ಲಿದ್ದಾರೆ.