ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಗುರುವಾರ ನಾನು ಅವಲೋಕನ ಸಭೆ ನಡೆಸಿದ್ದು, ಈ ರಾಜ್ಯಗಳಿಗೆ ಮುಂಗಡವಾಗಿ ₹1,000 ಕೋಟಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಿದ್ದೇವೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಕರಾವಳಿ ರಕ್ಷಣಾ ಪಡೆ, ಸೇನೆ, ನೌಕಾದಳ ಮತ್ತು ವಾಯುದಳ ಆಡಳಿತ ಸಂಸ್ಥೆಗಳೊಂದಿಗೆ ಕಾರ್ಯ ನಿರತವಾಗಿದೆ.ಚಂಡಮಾರುತದಿಂದ ತತ್ತರಿಸಿ ಹೋಗಿರುವ ರಾಜ್ಯಗಳ ಜನರೊಂದಿಗೆ ಇಡೀ ದೇಶದ ಜನರು ಮತ್ತು ಕೇಂದ್ರಸರ್ಕಾರ ಇದೆ ಎಂದು ಮೋದಿ ಹೇಳಿದ್ದಾರೆ.