ಶ್ರೀನಗರ: ಕಾಶ್ಮೀರದಲ್ಲಿ ಗೃಹಬಂಧನದಲ್ಲಿ ಇಡಲಾಗಿರುವ ರಾಜಕೀಯ ನಾಯಕರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯಪಾಲರ ಸಲಹೆಗಾರ ಫಾರೂಕ್ ಖಾನ್ ಹೇಳಿದ್ದಾರೆ.
ಜಮ್ಮುವಿನಲ್ಲಿ ಗೃಹಬಂಧನದಲ್ಲಿದ್ದ ನಾಯಕರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.