<p id="thickbox_headline"><strong>ಫರೂಕಾಬಾದ್:</strong> ಎಂಟು ಗಂಟೆಗಳ ಸತತ ಪ್ರಯತ್ನದ ನಂತರ ಒತ್ತೆಯಾಳಾಗಿದ್ದ 23 ಮಕ್ಕಳನ್ನು ಬಿಡುಗಡೆಗೊಳಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ಒತ್ತೆಯಾಳು ಮಾಡಿಕೊಂಡಿದ್ದ ಸುಭಾಶ್ನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ಇಲ್ಲಿನ ಕಸಾರಿಯಾ ಗ್ರಾಮದಲ್ಲಿ ಸುಭಾಶ್ ಭಾತಮ್ ಎನ್ನುವ ವ್ಯಕ್ತಿ ಗುರುವಾರ (ಜನವರಿ 30) ಸಂಜೆ ವೇಳೆಗೆ 23 ಮಕ್ಕಳನ್ನು ತನ್ನ ಮನೆಯಲ್ಲಿ ಬಂಧಿ ಮಾಡಿಕೊಂಡಿದ್ದ. ತನ್ನ ಮಗಳ ಹುಟ್ಟಿದ ದಿನದ ಸಂಭ್ರಮಾಚರಣೆಗಾಗಿ ಗ್ರಾಮದ ಸುಮಾರು 6 ತಿಂಗಳು ಮಗುವಿನಿಂದ ಹಿಡಿದು 15 ವರ್ಷದ ಮಕ್ಕಳನ್ನು ಆತ ತನ್ನ ಮನೆಗೆ ಕರೆದಿದ್ದ.</p>.<p>ಎಷ್ಟು ಹೊತ್ತಾದರೂ ಮನೆಗೆ ಮರಳದ ಮಕ್ಕಳ ಬಗ್ಗೆ ಕಳವಳಗೊಂಡ ಪೋಷಕರು, ಸುಭಾಷ್ ಮನೆ ಬಳಿ ಬಂದು ನೋಡಿದಾಗ, ಮಕ್ಕಳನ್ನು ಬಂಧಿಸಿ ಇಟ್ಟುಕೊಂಡಿರುವ ತಿಳಿದುಬಂದಿದೆ. ನಂತರ, ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸುಭಾಷ್ನ ಪತ್ನಿಮನೆಯಿಂದ ತಪ್ಪಿಸಿಕೊಳ್ಳಲು ಮುಂದಾದಾಗ, ಗ್ರಾಮಸ್ಥರು ಆಕೆಯನ್ನು ಥಳಿಸಿ, ಆಕೆಯ ಮೇಲೆ ಕಲ್ಲು ತೂರಿದ್ದಾರೆ. ತಲೆಗೆ ಗಂಭೀರ ಗಾಯವಾದ ಆಕೆಯನ್ನು ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಗುರುವಾರ ರಾತ್ರಿ ಆಕೆ ಸಾವನ್ನಪ್ಪಿದ್ದಾರೆ.</p>.<p>‘ಸುಭಾಷ್, ಮಾನಸಿಕ ಸ್ಥಿಮಿತ ಇಲ್ಲದವನಾಗಿದ್ದ ಎನಿಸುತ್ತದೆ. ಆತನೊಂದಿಗೆ ನಾವು ಮಾತನಾಡಲು ಪ್ರಯತ್ನ ನಡೆಸಿದೆವು. ಆದರೆ, ಆತ ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ’ ಎಂದು ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.</p>.<p>ಆತ ಮೇಲೆ ಕೊಲೆ ಆರೋಪವಿದ್ದು,ಜಾಮೀನಿನ ಮೇಲೆ ಹೊರಗಿದ್ದನು.</p>.<p><strong>ಬಹುಮಾನ ಘೋಷಣೆ:</strong> ಮಕ್ಕಳನ್ನು ರಕ್ಷಣೆ ಮಾಡಿದ ಉತ್ತರ ಪ್ರದೇಶ ಪೊಲೀಸರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಕಾರ್ಯಚರಣೆ ನಡೆಸಿದ ಪೊಲೀಸರ ತಂಡಕ್ಕೆ ₹10 ಲಕ್ಷ ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಫರೂಕಾಬಾದ್:</strong> ಎಂಟು ಗಂಟೆಗಳ ಸತತ ಪ್ರಯತ್ನದ ನಂತರ ಒತ್ತೆಯಾಳಾಗಿದ್ದ 23 ಮಕ್ಕಳನ್ನು ಬಿಡುಗಡೆಗೊಳಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ಒತ್ತೆಯಾಳು ಮಾಡಿಕೊಂಡಿದ್ದ ಸುಭಾಶ್ನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ಇಲ್ಲಿನ ಕಸಾರಿಯಾ ಗ್ರಾಮದಲ್ಲಿ ಸುಭಾಶ್ ಭಾತಮ್ ಎನ್ನುವ ವ್ಯಕ್ತಿ ಗುರುವಾರ (ಜನವರಿ 30) ಸಂಜೆ ವೇಳೆಗೆ 23 ಮಕ್ಕಳನ್ನು ತನ್ನ ಮನೆಯಲ್ಲಿ ಬಂಧಿ ಮಾಡಿಕೊಂಡಿದ್ದ. ತನ್ನ ಮಗಳ ಹುಟ್ಟಿದ ದಿನದ ಸಂಭ್ರಮಾಚರಣೆಗಾಗಿ ಗ್ರಾಮದ ಸುಮಾರು 6 ತಿಂಗಳು ಮಗುವಿನಿಂದ ಹಿಡಿದು 15 ವರ್ಷದ ಮಕ್ಕಳನ್ನು ಆತ ತನ್ನ ಮನೆಗೆ ಕರೆದಿದ್ದ.</p>.<p>ಎಷ್ಟು ಹೊತ್ತಾದರೂ ಮನೆಗೆ ಮರಳದ ಮಕ್ಕಳ ಬಗ್ಗೆ ಕಳವಳಗೊಂಡ ಪೋಷಕರು, ಸುಭಾಷ್ ಮನೆ ಬಳಿ ಬಂದು ನೋಡಿದಾಗ, ಮಕ್ಕಳನ್ನು ಬಂಧಿಸಿ ಇಟ್ಟುಕೊಂಡಿರುವ ತಿಳಿದುಬಂದಿದೆ. ನಂತರ, ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸುಭಾಷ್ನ ಪತ್ನಿಮನೆಯಿಂದ ತಪ್ಪಿಸಿಕೊಳ್ಳಲು ಮುಂದಾದಾಗ, ಗ್ರಾಮಸ್ಥರು ಆಕೆಯನ್ನು ಥಳಿಸಿ, ಆಕೆಯ ಮೇಲೆ ಕಲ್ಲು ತೂರಿದ್ದಾರೆ. ತಲೆಗೆ ಗಂಭೀರ ಗಾಯವಾದ ಆಕೆಯನ್ನು ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಗುರುವಾರ ರಾತ್ರಿ ಆಕೆ ಸಾವನ್ನಪ್ಪಿದ್ದಾರೆ.</p>.<p>‘ಸುಭಾಷ್, ಮಾನಸಿಕ ಸ್ಥಿಮಿತ ಇಲ್ಲದವನಾಗಿದ್ದ ಎನಿಸುತ್ತದೆ. ಆತನೊಂದಿಗೆ ನಾವು ಮಾತನಾಡಲು ಪ್ರಯತ್ನ ನಡೆಸಿದೆವು. ಆದರೆ, ಆತ ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ’ ಎಂದು ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.</p>.<p>ಆತ ಮೇಲೆ ಕೊಲೆ ಆರೋಪವಿದ್ದು,ಜಾಮೀನಿನ ಮೇಲೆ ಹೊರಗಿದ್ದನು.</p>.<p><strong>ಬಹುಮಾನ ಘೋಷಣೆ:</strong> ಮಕ್ಕಳನ್ನು ರಕ್ಷಣೆ ಮಾಡಿದ ಉತ್ತರ ಪ್ರದೇಶ ಪೊಲೀಸರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಕಾರ್ಯಚರಣೆ ನಡೆಸಿದ ಪೊಲೀಸರ ತಂಡಕ್ಕೆ ₹10 ಲಕ್ಷ ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>