ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕರ ಸಂಬಳ ತಡೆ ಹಿಡಿಯದಂತೆ ಆಗ್ರಹ

Last Updated 18 ಜೂನ್ 2018, 18:51 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ, ಬಿ.ಇಡಿ ಪದವಿ ಪೂರ್ಣಗೊಳಿಸದ ಉಪನ್ಯಾಸಕರ ಸಂಬಳವನ್ನು ತಡೆ ಹಿಡಿಯಲಾಗಿದೆ. ಅವರ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವವರೆಗೂ ಸಂಬಳ ತಡೆ ಹಿಡಿಯದಂತೆ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಎನ್‌. ಮಹೇಶ ಅವರಿಗೆ ಶಾಸಕ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಎನ್‌.ಸಿ.ಇ.ಆರ್‌.ಟಿ. ನಿಯಮಾವಳಿ ಪ್ರಕಾರ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಬಿ.ಇಡಿ. ಪದವಿ ಪಡೆದಿರಬೇಕು. ಈ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದು, ಅವರಿಗೆ ನಾಲ್ಕು ವರ್ಷ ಕಾಲಾವಕಾಶ ನೀಡಲಾಗಿತ್ತು. ಆದರೆ, ರಜೆ ಹಾಗೂ ಶಿಷ್ಯವೇತನ ನೀಡಲು ಸಾಧ್ಯವಿಲ್ಲದ್ದರಿಂದ ಉಪನ್ಯಾಸಕರಿಗೆ ಬಿ.ಇಡಿ ಅಧ್ಯಯನ ಮಾಡಲು ಸಾಧ್ಯವಾಗಿಲ್ಲ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಅಂಚೆ ತೆರಪಿನ ಮೂಲಕ ಶಿಕ್ಷಣ ಪಡೆಯಬೇಕೆಂದರೆ ಡಿ.ಇಡಿ ಅಧ್ಯಯನ ಮಾಡಿರಬೇಕು ಎಂದಿದೆ. ಬಿ.ಇಡಿ ಪದವಿ ಹೊಂದಿರದಿದ್ದರೂ ಹುದ್ದೆಗಳಿಗೆ ವೇತನಾನುದಾನ ನೀಡಿರುವುದರಿಂದ ಸರ್ಕಾರವೂ ಹೊಣೆಯಾಗಿದೆ. ಅವರು ವೇತನ ಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು, ಪರಿಹಾರ ಕಂಡು ಹಿಡಿಯಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT