ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವಿರುದ್ಧ ಸಮರ: ಪಿಎಂ– ಕೇರ್ಸ್‌ಗೆ ಭರಪೂರ ನೆರವು

Last Updated 30 ಮಾರ್ಚ್ 2020, 21:11 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ವಿರುದ್ಧದ ಹೋರಾಟದ ನೆರವಿಗಾಗಿಪ್ರಧಾನಮಂತ್ರಿ ನಾಗರಿಕ ಸಹಕಾರ ಮತ್ತು ತುರ್ತು ಸಂದರ್ಭ ಪರಿಹಾರ ನಿಧಿಗೆ (ಪಿಎಂ– ಕೇರ್ಸ್‌) ಹಿರಿಯ ವಕೀಲ ರಾಕೇಶ್‌ ದ್ವಿವೇದಿ ₹1 ಕೋಟಿ ದೇಣಿಗೆ ನೀಡುವುದಾಗಿ ತಿಳಿಸಿದ್ದಾರೆ.

ಸಂಸದರ ಸ್ಪಂದನೆ:ಸ್ಥಳೀಯವಾಗಿ ಕೊರೊನಾ ವೈರಸ್‌ ನಿಯಂತ್ರಿಸಲು ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ(ಎಂಪಿಲ್ಯಾಡ್‌) ₹1 ಕೋಟಿ ನೀಡುವಂತೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಮಾಡಿಕೊಂಡ ಮನವಿಗೆ 35 ಸಂಸದರು ಸ್ಪಂದಿಸಿದ್ದಾರೆ.

‘ದೇಶ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯ’ ಎಂದು ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಸಂಸದರನ್ನು ಉದ್ದೇಶಿಸಿ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದರುವ ಸಂಸದರುಹಣ ನೀಡುವುದಾಗಿ ಒಪ್ಪಿಗೆ ಪತ್ರವನ್ನು ಕಳುಹಿಸಿದ್ದಾರೆ ಎಂದುಲೋಕಸಭಾ ಸಚಿವಾಲಯದ ಮೂಲಗಳು ತಿಳಿಸಿವೆ.

ರಾಜ್ಯಪಾಲರ ನೆರವು: ಉತ್ತರಾಖಂಡ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರು ತಮ್ಮ ತಿಂಗಳ ಸಂಬಳವನ್ನು ಪಿಎಂ ಕೇರ್ಸ್‌ಗೆ ನೀಡುವುದಾಗಿ ಘೋಷಿಸಿದ್ದಾರೆ.

‘ಸುಪ್ರೀಂ’ ಸಹಾಯ:ಸುಪ್ರೀಂ ಕೋರ್ಟ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೂರು ದಿನಗಳ ಸಂಬಳ ನೀಡುವುದಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT