ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರ ಕ್ಷೇತ್ರದಲ್ಲಿ ಬೀದರ್‌ ಅಭಿವೃದ್ಧಿ’

Last Updated 2 ಫೆಬ್ರುವರಿ 2018, 9:15 IST
ಅಕ್ಷರ ಗಾತ್ರ

ಬೀದರ್: ‘ಸಹಕಾರ ಕ್ಷೇತ್ರದಲ್ಲಿ ಬೀದರ್‌ ಜಿಲ್ಲೆ ಬಹಳಷ್ಟು ಅಭಿವೃದ್ಧಿ ಹೊಂದಿದೆ. ಇದರಲ್ಲಿ ದಿವಂಗತ ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಕೊಡುಗೆ ಸ್ಮರಣೀಯ’ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಅರುಣಕುಮಾರ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾದ ಅಧ್ಯಯನ ಪ್ರವಾಸ ಕಾರ್ಯಕ್ರಮವನ್ನು ನಗರದ ನೌಬಾದ್‌ನಲ್ಲಿ ಇರುವ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

‘ಸಹಾರ್ದ ತರಬೇತಿ ಕೇಂದ್ರದಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಸಹಕಾರಿಗಳು ಮತ್ತು ಸಹಕಾರೇತರು ತರಬೇತಿ ಪಡೆಯುತ್ತಿದ್ದಾರೆ’ ಎಂದು ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಭಾಗಾರೆಡ್ಡಿ ಚಿನ್ನಾರೆಡ್ಡಿ, ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲಕೂಡ, ಡಿಸಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಹತ್ತಿ ಇದ್ದರು. ಸಹಾರ್ದ ತರಬೇತಿ ಕೇಂದ್ರದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಲಕ್ಷ್ಮಿಕಾಂತ ಕಟ್ಟಿಮನಿ ನಿರೂಪಿಸಿದರು. ಪಿ. ರುದ್ರಪ್ಪ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT