ನವದೆಹಲಿ: ತಲೆಮರೆಸಿಕೊಂಡಿರುವ ಸ್ವಯಂಪ್ರೇರಿತ ದೇವಮಾನವ ವೀರೇಂದ್ರ ದೇವ್ ದೀಕ್ಷಿತ್ ವಿರುದ್ಧ ಸಿಬಿಐ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಉತ್ತರ ಪ್ರದೇಶದ ಆಧ್ಯಾತ್ಮಿಕ ವಿದ್ಯಾಲಯ ಆಶ್ರಮದಲ್ಲಿ 1999ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಾಗೂ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡ ಆರೋಪಗಳನ್ನು ಹೊರಿಸಲಾಗಿದೆ. ಈತನ ತಲೆಗೆ ₹5 ಲಕ್ಷ ಬಹುಮಾನ ಘೋಷಿಸಲಾಗಿದೆ.