ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಕೊಳೆಗೇರಿಗೆ ಬೆಂಕಿ; 200 ಗುಡಿಸಲು ಭಸ್ಮ

Last Updated 3 ಜೂನ್ 2020, 3:08 IST
ಅಕ್ಷರ ಗಾತ್ರ

ನವದೆಹಲಿ:ದೆಹಲಿಯ ತುಘಲಕಾಬಾದ್‌ ಪ್ರದೇಶದಲ್ಲಿರುವ ಕೊಳೆಗೇರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 200ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿದೆ.

ಬುಧವಾರಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ನೂರಾರು ಜನರು ಆಶ್ರಯ ಕಳೆದುಕೊಂಡಿದ್ದಾರೆ. ಆದಾಗ್ಯೂ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿಸಿವೆ.

ಈ ಬಗ್ಗೆ ಮಾತನಾಡಿರುವ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಎಸ್‌ಕೆ ದುವಾ, ‘ಮಧ್ಯರಾತ್ರಿ 1.31ಕ್ಕೆ ಈ ಸಂಬಂಧ ಒಂದು ಕರೆ ಬಂತು. ಕೂಡಲೇ 20 ಅಗ್ನಿಶಾಮಕ ವಾಹನಗಳನ್ನು ಕಳುಹಿಸಿಕೊಡಲಾಯಿತು. 3 ಗಂಟೆ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ತರಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

ಈ ಮೊದಲು ಮೇ 26 ರಂದು ಸಿಲಿಂಡರ್ ಸ್ಫೋಟಗೊಂಡು ಇದೇ ಪ್ರದೇಶದಲ್ಲಿ ನೂರಾರು ಗುಡಿಸಲುಗಳು ಸುಟ್ಟುಹೋಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT