<p><strong>ತಿರುವನಂತಪುರ:</strong> ‘ಕೋವಿಡ್ 19’ ಸೋಂಕು ದೇಶದಲ್ಲಿ ವ್ಯಾಪಿಸಿದೆ. ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39ಕ್ಕೆ ಏರಿದೆ.</p>.<p>ಮುಂಜಾಗ್ರತಾ ಕ್ರಮಗಳಿಗೆ ಸೇನೆ, ವಿವಿಧ ರಾಜ್ಯಗಳು ಒತ್ತು ನೀಡಿವೆ. ಸೋಂಕು ಪೀಡಿತರಿಗೆ ಚಿಕಿತ್ಸೆ ಒದಗಿಸಲು ಪ್ರತ್ಯೇಕವಾಗಿ ತುರ್ತು ವಿಭಾಗ ರಚಿಸಿ, ಹಾಸಿಗೆಗಳನ್ನು ಕಾದಿರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಏಮ್ಸ್ ಆಡಳಿತ ಮಂಡಳಿಗೆ ಕೋರಿದೆ.</p>.<p>ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಈಚೆಗೆ ಇಟಲಿಯಿಂದ ಮರಳಿದ್ದ ದಂಪತಿ ಮತ್ತು ಅವರ ಪುತ್ರನಿಗೆ ಸೋಂಕು ತಗುಲಿದೆ. ಇವರ ಮೂಲಕ ಅವರ ಇಬ್ಬರು ಸಂಬಂಧಿಕರಿಗೂ ವ್ಯಾಪಿಸಿದೆ.</p>.<p><strong>ಮಂಗಳೂರು ವರದಿ:</strong> ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ ವ್ಯಕ್ತಿಯೊಬ್ಬರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದು, ಸೋಂಕಿನ ಶಂಕೆ ಮೇಲೆ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಕೋವಿಡ್ 19’ ಸೋಂಕು ದೇಶದಲ್ಲಿ ವ್ಯಾಪಿಸಿದೆ. ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39ಕ್ಕೆ ಏರಿದೆ.</p>.<p>ಮುಂಜಾಗ್ರತಾ ಕ್ರಮಗಳಿಗೆ ಸೇನೆ, ವಿವಿಧ ರಾಜ್ಯಗಳು ಒತ್ತು ನೀಡಿವೆ. ಸೋಂಕು ಪೀಡಿತರಿಗೆ ಚಿಕಿತ್ಸೆ ಒದಗಿಸಲು ಪ್ರತ್ಯೇಕವಾಗಿ ತುರ್ತು ವಿಭಾಗ ರಚಿಸಿ, ಹಾಸಿಗೆಗಳನ್ನು ಕಾದಿರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಏಮ್ಸ್ ಆಡಳಿತ ಮಂಡಳಿಗೆ ಕೋರಿದೆ.</p>.<p>ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಈಚೆಗೆ ಇಟಲಿಯಿಂದ ಮರಳಿದ್ದ ದಂಪತಿ ಮತ್ತು ಅವರ ಪುತ್ರನಿಗೆ ಸೋಂಕು ತಗುಲಿದೆ. ಇವರ ಮೂಲಕ ಅವರ ಇಬ್ಬರು ಸಂಬಂಧಿಕರಿಗೂ ವ್ಯಾಪಿಸಿದೆ.</p>.<p><strong>ಮಂಗಳೂರು ವರದಿ:</strong> ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ ವ್ಯಕ್ತಿಯೊಬ್ಬರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದು, ಸೋಂಕಿನ ಶಂಕೆ ಮೇಲೆ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>