ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಕರಾವಳಿಗೆ ಅಕ್ರಮ ಪ್ರವೇಶ: ಐವರು ಶ್ರೀಲಂಕಾ ಪ್ರಜೆಗಳು ಕಾವಲು ಪಡೆ ವಶಕ್ಕೆ

Last Updated 27 ಫೆಬ್ರುವರಿ 2020, 9:21 IST
ಅಕ್ಷರ ಗಾತ್ರ

ರಾಮೇಶ್ವರ (ತಮಿಳುನಾಡು): ಭಾರತೀಯ ಸಮುದ್ರದಲ್ಲಿ ಅಕ್ರಮವಾಗಿ ಪ್ರವೇಶಿಸಿದ ಐದು ಮಂದಿ ಶ್ರೀಲಂಕಾ ಪ್ರಜೆಗಳನ್ನು ನೌಕಾದಳದಹೆಲಿಕಾಪ್ಟರ್ ಪತ್ತೆ ಹಚ್ಚಿ ಇಲ್ಲಿನ ಕರಾವಳಿ ಕಾವಲು ಪಡೆ ವಶಕ್ಕೆ ನೀಡಿದೆ.

ಭಾರತೀಯ ನೌಕಾದಳದಕಣ್ಗಾವಲು ಹೆಲಿಕಾಪ್ಟರ್ ಸಮುದ್ರ ತೀರದಲ್ಲಿ ಹಾರಾಟ ನಡೆಸುತ್ತಿದ್ದಾಗ ಧನುಸ್ಕೋಟಿಯ ಸಮುದ್ರ ತೀರದಅರಿಚಲ್ ಮುನೈ ಎಂಬ ಪ್ರದೇಶದಲ್ಲಿ ಯಾಂತ್ರಿಕ ದೋಣಿಯೊಂದು ಸಂಚರಿಸುತ್ತಿರುವುದು ಪತ್ತೆಯಾಗಿದೆ.

ಕೂಡಲೆ ಸ್ಥಳಕ್ಕೆ ಧಾವಿಸಿದ ನೌಕಾದಳದಅಧಿಕಾರಿಗಳು ಅಪರಿಚಿತರನ್ನು ವಿಚಾರಿಸಿದಾಗ ಇವರೆಲ್ಲಾ ಶ್ರೀಲಂಕಾ ಪ್ರಜೆಗಳಾಗಿದ್ದು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುತ್ತಿರುವುದು ಕಂಡು ಬಂತು. ಕೂಡಲೆ ಅವರನ್ನು ತಮಿಳುನಾಡಿನ ಕರಾವಳಿ ಕಾವಲು ಪಡೆಯ ವಶಕ್ಕೆ ನೀಡಿದ್ದಾರೆ. ವಿಚಾರಣೆ ನಡೆಯುತ್ತಿದೆ ಎಂದು ಎಎನ್ ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT