ಜೈಪುರ: ರಾಜಸ್ಥಾನದ ಹಾಡೌತೀ ಪ್ರಾಂತದಲ್ಲಿ ಗುರುವಾರದಿಂದ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ 5 ಜನರು ಮೃತಪಟ್ಟಿದ್ದಾರೆ.
ಹಾಡೌತೀ ಪ್ರಾಂತದಲ್ಲಿ ಪ್ರವಾಹದ ಸ್ಥಿತಿ ತಲೆದೋರಿದೆ. ಈ ಪ್ರಾಂತದ ವ್ಯಾಪ್ತಿಯಲ್ಲಿರುವಜೋಧಪುರ, ನಾಗೌರ್ ಮತ್ತು ಪಾಲಿ ಜಿಲ್ಲೆಗಳಲ್ಲಿ ಶನಿವಾರ ಸಂಜೆವರೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನಧವಾಗಿರುವಂತೆ ಸೇನೆಗೆ ಸೂಚನೆ ನೀಡಲಾಗಿದೆ.
ಕೋಟಾ, ಬರಾನ್, ಬಿಲ್ವಾರಾ ಮತ್ತು ಬುಂದಿ ಜಿಲ್ಲೆಗಳಲ್ಲಿ ಗುರುವಾರದಿಂದ ಶುಕ್ರವಾರ ಸಂಜೆವರೆಗೆ 160 ಮಿಲಿಮೀಟರ್ ಮಳೆಯಾಗಿದೆ.
ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ರವಿಶಾಸ್ತ್ರಿ ಅವರ ಹೆಸರನ್ನು ಶಿಫಾರಸು ಮಾಡಿದೆ. ಈ ನಿರ್ಧಾರ ಸರಿಯೇ?