ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನಕಾರರಿಗೆ ವಿದೇಶಿ ಹಣ: ಕಿರಣ್‌ ರಿಜಿಜು ಆರೋಪ

Last Updated 16 ಜನವರಿ 2020, 20:00 IST
ಅಕ್ಷರ ಗಾತ್ರ

ಲಖನೌ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಸುತ್ತಿರುವ ಪ್ರತಿಭಟನಕಾರರುವಿದೇಶದಿಂದ ದೇಣಿಗೆ ಪಡೆಯುತ್ತಿದ್ದಾರೆ. ದೇಶವನ್ನು ವಿಭಾಗಿಸುವುದೇ ಇವರ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಆರೋಪ‍ ಮಾಡಿದ್ದಾರೆ.

‘ಕಾಯ್ದೆಯನ್ನು ವಿರೋಧಿಸುತ್ತಿರುವ ಈ ‘ತುಕಡೆ ತುಕಡೆ ಗ್ಯಾಂಗ್‌’ನ ಸಂಖ್ಯೆ ಕಡಿಮೆ ಇದೆ. ಕೆಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಚಲನಚಿತ್ರತಾರೆಯರು ಮತ್ತುಸಾಮಾಜಿಕ ಜಾಲತಾಣವನ್ನು ತಮ್ಮ ಉದ್ದೇಶ ಸಾಧನೆಗಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

‘ಯುವಕರು ಇಂತಹ ದೇಶದ್ರೋಹಿಗಳ ಕಾರ್ಯಕ್ಕೆ ಬೆಂಬಲ ನೀಡದೇ, ಶ್ರೇಷ್ಠ ಭಾರತವನ್ನು ನಿರ್ಮಿಸಲು ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT