ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಆತ್ಮಾಹುತಿ ದಾಳಿ ನಡೆಸುವುದಕ್ಕಾಗಿ ಜೈಷ್- ಎ- ಮೊಹಮ್ಮದ್ ಉಗ್ರಸಂಘಟನೆ ಸಂಚು ನಡೆಸಿದೆ ಎಂಬ ಗುಪ್ತಚರ ಮಾಹಿತಿ ನಮಗೆ ಲಭಿಸಿತ್ತು ಎಂದುವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಗೋಖಲೆ, ಬಲಾಕೋಟ್ನಲ್ಲಿರುವ ಜೈಷೆ ಉಗ್ರ ಸಂಘಟನೆಯ ಬೃಹತ್ ಶಿಬಿರದ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿದೆ.
ಮುಂಜಾನೆ ವೇಳೆ ಭಾರತ ಬಲಾಕೋಟ್ನಲ್ಲಿರುವ ಜೈಷ್- ಎ-ಮೊಹಮ್ಮದ್ ಶಿಬಿರದ ಮೇಲೆ ದಾಳಿ ನಡೆಸಿ ಜೈಷ್- ಎ-ಮೊಹಮ್ಮದ್ ಸಂಘಟನೆಯ ಉಗ್ರರು, ತರಬೇತಿದಾರರು, ಹಿರಿಯ ಕಮಾಂಡರ್ ಮತ್ತು ಜಿಹಾದಿಗಳನ್ನು ಹತ್ಯೆ ಮಾಡಿದೆ.
#WATCH Foreign Secy says,"This facility in Balakot was headed by Maulana Yusuf Azhar alias Ustad Ghauri, brother in law of JeM Chief Masood Azhar...The selection of the target was also conditioned by our desire to avoid civilian casualty. It's located in deep forest on a hilltop" pic.twitter.com/QENnnkU5Rh
ಭಯೋತ್ಪಾದನೆ ನಿರ್ಮೂಲನೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವ ಕಾರ್ಯಕ್ಕೆ ಭಾರತ ಕಂಕಣಬದ್ಧವಾಗಿದೆ. ಈ ಕಾರ್ಯಾಚರಣೆ ಜೈಷೆ ಸಂಘಟನೆಯ ಶಿಬಿರಗಳನ್ನೇ ಗುರಿಯಾಗಿರಿಸಿ ಮಾಡಲಾಗಿದೆ. ನಾಗರಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಗೋಖಲೆ ಹೇಳಿದ್ದಾರೆ.