ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ₹ 5 ಕೋಟಿ ನೀಡಿದವರಿಗೆ ಟಿಕೆಟ್‌: ಹರಿಯಾಣ ಕಾಂಗ್ರೆಸ್‌ ನಾಯಕನ ಆರೋಪ

Last Updated 17 ಅಕ್ಟೋಬರ್ 2019, 10:44 IST
ಅಕ್ಷರ ಗಾತ್ರ

ಚಂಡಿಗಡ: ಕಾಂಗ್ರೆಸ್‌ ಪಕ್ಷಕ್ಕೆ ಪಕ್ಷದ ಅಭ್ಯರ್ಥಿ ಗೆಲುವು ಮುಖ್ಯವಲ್ಲ, ₹ 5 ಕೋಟಿ ನೀಡಿದವರಿಗೆ ಟಿಕೆಟ್‌ ನೀಡಲಾಗುತ್ತಿದೆ ಎಂದುಹರಿಯಾಣದ ಕಾಂಗ್ರೆಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಅಶೋಕ್‌ ತನ್ವಾರ್‌ ಬುಧವಾರ ಆರೋಪಿಸಿದ್ದಾರೆ.

ಅಶೋಕ್‌ ತನ್ವಾರ್‌ ಅವರು ಸೋನಾ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್‌ ನೀಡದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಹಣಕ್ಕಾಗಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿನ ಕಾಂಗ್ರೆಸ್‌ ಮುಖ್ಯ ಕಚೇರಿಯ ಎದುರು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ಅವರು, ಪಕ್ಷಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿದ್ದೇನೆ ಕಳೆದ 5 ವರ್ಷ ಪಕ್ಷದ ನಾಯಕನಾಗಿ ಪಕ್ಷವನ್ನು ಬೆಳೆಸಿದ್ದೇನೆ ಆದರೂ ಟಿಕೆಟ್‌ ನೀಡದೇ ವಂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಹೊಸದಾಗಿ ಬಂದವರಿಗೆ ಮಣೆ ಹಾಕಲಾಗುತ್ತಿದ್ದು, ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗುತ್ತಿದೆ ಎಂದು ಟಿಕೆಟ್‌ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗುತ್ತಿಲ್ಲ ಎಂದುಅಶೋಕ್‌ ತನ್ವಾರ್‌ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT