<p><strong>ನೋಯ್ಡ:</strong> ಕರ್ನಾಟಕದ ಮಾಜಿ ರಾಜ್ಯಪಾಲ ತ್ರಿಲೋಕ ನಾಥ ಚತುರ್ವೇದಿ ಅವರು ತಮ್ಮ 90 ವಯಸ್ಸಿನಲ್ಲಿ ಭಾನುವಾರ ರಾತ್ರಿ ನೋಯ್ಡದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ.</p>.<p>ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಅವರನ್ನು ಕುಟುಂಬಸ್ಥರು ನೋಯ್ಡದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಅಷ್ಟುಹೊತ್ತಿಗಾಗಲೇ ಇಹಲೋಕ ತ್ಯಜಿಸಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p>1929ರ ಜನವರಿ 19ರಂದು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಚತುರ್ವೇದಿ ಜನಿಸಿದ್ದರು. ಐಎಎಸ್ ಅಧಿಕಾರಿಯೂ ಆಗಿದ್ದ ಅವರು, ಭಾರತ ಸರ್ಕಾರದ ಸಿಎಜಿ (ಆಡಿಟರ್ ಜನರಲ್) ಆಗಿದ್ದರು. 1991ರಲ್ಲಿ ಅವರಿಗೆ ಭಾರತ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.</p>.<p>2002ರಿಂದ 2007ರ ಅವಧಿಯಲ್ಲಿ ಅವರು ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.</p>.<p>ಟಿ.ಎನ್ ಚುತುರ್ವೇದಿ ಅವರಿಗೆ ಮೂವರು ಪುತ್ರರು, ಒಬ್ಬರು ಪುತ್ರಿ ಇದ್ದಾರೆ. ಇಬ್ಬರು ಗಂಡು ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದರೆ, ಪುತ್ರಿ ನೋಯ್ಡದ ಸೆಕ್ಟರ್ 17ರಲ್ಲಿ ವಾಸವಿದ್ದಾರೆ.</p>.<p>ಅವರ ಅಂತ್ಯ ಸಂಸ್ಕಾರವನ್ನು ಕಾರಣಾಂತರಗಳಿಂದಾಗಿ ಎರಡು ದಿನಗಳ ನಂತರ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಸದ್ಯ ಅವರ ಶರೀರವನ್ನು ಕೈಲಾಶ್ ಆಸ್ಪತ್ರೆಯಲ್ಲೇ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೋಯ್ಡ:</strong> ಕರ್ನಾಟಕದ ಮಾಜಿ ರಾಜ್ಯಪಾಲ ತ್ರಿಲೋಕ ನಾಥ ಚತುರ್ವೇದಿ ಅವರು ತಮ್ಮ 90 ವಯಸ್ಸಿನಲ್ಲಿ ಭಾನುವಾರ ರಾತ್ರಿ ನೋಯ್ಡದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ.</p>.<p>ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಅವರನ್ನು ಕುಟುಂಬಸ್ಥರು ನೋಯ್ಡದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಅಷ್ಟುಹೊತ್ತಿಗಾಗಲೇ ಇಹಲೋಕ ತ್ಯಜಿಸಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p>1929ರ ಜನವರಿ 19ರಂದು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಚತುರ್ವೇದಿ ಜನಿಸಿದ್ದರು. ಐಎಎಸ್ ಅಧಿಕಾರಿಯೂ ಆಗಿದ್ದ ಅವರು, ಭಾರತ ಸರ್ಕಾರದ ಸಿಎಜಿ (ಆಡಿಟರ್ ಜನರಲ್) ಆಗಿದ್ದರು. 1991ರಲ್ಲಿ ಅವರಿಗೆ ಭಾರತ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.</p>.<p>2002ರಿಂದ 2007ರ ಅವಧಿಯಲ್ಲಿ ಅವರು ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.</p>.<p>ಟಿ.ಎನ್ ಚುತುರ್ವೇದಿ ಅವರಿಗೆ ಮೂವರು ಪುತ್ರರು, ಒಬ್ಬರು ಪುತ್ರಿ ಇದ್ದಾರೆ. ಇಬ್ಬರು ಗಂಡು ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದರೆ, ಪುತ್ರಿ ನೋಯ್ಡದ ಸೆಕ್ಟರ್ 17ರಲ್ಲಿ ವಾಸವಿದ್ದಾರೆ.</p>.<p>ಅವರ ಅಂತ್ಯ ಸಂಸ್ಕಾರವನ್ನು ಕಾರಣಾಂತರಗಳಿಂದಾಗಿ ಎರಡು ದಿನಗಳ ನಂತರ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಸದ್ಯ ಅವರ ಶರೀರವನ್ನು ಕೈಲಾಶ್ ಆಸ್ಪತ್ರೆಯಲ್ಲೇ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>