ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಂಸದ ಉದಯ್‌ ಸಿಂಗ್‌ ಬಿಜೆಪಿಗೆ ರಾಜೀನಾಮೆ

Last Updated 18 ಜನವರಿ 2019, 20:12 IST
ಅಕ್ಷರ ಗಾತ್ರ

ಪಟ್ನಾ: ಬಿಜೆಪಿ ಮಾಜಿ ಸಂಸದ ಉದಯ್‌ ಸಿಂಗ್‌ ಅವರು ಪಕ್ಷದ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಮಹಾಮೈತ್ರಿ ಕಡೆಗೆ ಒಲವು ತೋರಿರುವ ಅವರು, ಕಾಂಗ್ರೆಸ್‌ ಅಥವಾ ರಾಷ್ಟ್ರೀಯ ಜನತಾ ದಳದಿಂದ (ಆರ್‌ಜೆಡಿ) ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

‘ಸಂಯುಕ್ತ ಜನತಾ ದಳ (ಜೆಡಿಯು) ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರಿಗೆ ಬಿಜೆಪಿ ಶರಣಾಗಿದೆ’ ಎಂದು ಎರಡು ಬಾರಿ ಸಂಸದರಾಗಿದ್ದ ಸಿಂಗ್‌ ಆರೋಪಿಸಿದ್ದಾರೆ.

‘ಬೆಂಬಲಿಗರ ಜತೆಗೆ ಚರ್ಚಿಸಿದ ನಂತರ ರಾಹುಲ್‌ ಗಾಂಧಿ ಹಾಗೂ ಲಾಲು ಪ್ರಸಾದ್‌ ಅವರ ಜತೆಗೆ ಚರ್ಚಿಸುತ್ತೇನೆ. ಈವರೆಗೆ ಯಾವುದೇ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಿಲ್ಲ. ಆದರೆ, ಮಹಾಮೈತ್ರಿಯ ಭಾಗವಾಗುತ್ತೇನೆ’ ಎಂದು ಅವರು ಹೇಳಿದ್ದಾರೆ.

* ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT