ಆಜಂಗಡದವರಾದ ಅಮರ್ ಸಿಂಗ್ ಜಿಲ್ಲೆಯ ಅಭಿವೃದ್ಧಿಯಲ್ಲಿ ಗಣನೀಯ ಪಾತ್ರ ವಹಿಸಿದ್ದರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆಪ್ತರೂ ಆಗಿದ್ದರು. 2010ರಲ್ಲಿ ಪಕ್ಷದಿಂದ ದೂರವಾದ ಅವರು ಪೂರ್ವಾಂಚಲದ ಬೇಡಿಕೆಗಾಗಿ ರಾಷ್ಟ್ರೀಯ ಲೋಕ ಮಂಚ್ ಸ್ಥಾಪಿಸಿದ್ದರು. 2012ರ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕ ಮಂಚ್ 360 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಷ್ಟೂ ಕ್ಷೇತ್ರಗಳಲ್ಲಿ ಸೋಲನುಭವಿಸಿತ್ತು. ನಂತರ ರಾಜಕೀಯದಿಂದ ದೂರ ಸರಿದಿದ್ದರು. 2016ರಲ್ಲಿ ಮತ್ತೆ ಸಮಾಜವಾದಿ ಪಕ್ಷ ಸೇರಿದ್ದರೂ ಅವರನ್ನು ಅಖಿಲೇಶ್ ಯಾದವ್ ಪಕ್ಷದಿಂದ ಉಚ್ಚಾಟಿಸಿದ್ದರು.