<p><strong>ನವದೆಹಲಿ:</strong> ಇಂಧನ ಮತ್ತು ಸಂಪನ್ಮೂಲ ಗಳ ಸಂಸ್ಥೆಯ (ಟಿಇಆರ್ಐ) ಮಾಜಿ ಮುಖ್ಯಸ್ಥ ಮತ್ತು ಪರಿಸರವಾದಿ ಆರ್.ಕೆ.ಪಚೌರಿ (79) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಗುರುವಾರ ಇಲ್ಲಿ ನಿಧನರಾದರು.</p>.<p>ಹಲವು ವರ್ಷಗಳಿಂದ ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇಲ್ಲಿನ ಎಸ್ಕಾರ್ಟ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಈ ಮೊದಲು ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಇದೇ ಆಸ್ಪತ್ರೆಯಲ್ಲಿ ನೆರವೇರಿಸಲಾಗಿತ್ತು.</p>.<p>ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕಾರ ಪ್ರದಾನ ಮಾಡಲಾಗಿತ್ತು.</p>.<p>ಹವಾಮಾನ ಬದಲಾವಣೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ದೇಶಗಳ ನಡುವೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ‘ಇಂಟರ್ಗವರ್ನ್ಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್’ (ಐಪಿಸಿಸಿ) ಅಧ್ಯಕ್ಷರಾಗಿ ಪಚೌರಿ ಸೇವೆ ಸಲ್ಲಿಸುತ್ತಿದ್ದಾಗ 2007ರಲ್ಲಿ ಈ ಸಂಸ್ಥೆಗೆ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಧನ ಮತ್ತು ಸಂಪನ್ಮೂಲ ಗಳ ಸಂಸ್ಥೆಯ (ಟಿಇಆರ್ಐ) ಮಾಜಿ ಮುಖ್ಯಸ್ಥ ಮತ್ತು ಪರಿಸರವಾದಿ ಆರ್.ಕೆ.ಪಚೌರಿ (79) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಗುರುವಾರ ಇಲ್ಲಿ ನಿಧನರಾದರು.</p>.<p>ಹಲವು ವರ್ಷಗಳಿಂದ ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇಲ್ಲಿನ ಎಸ್ಕಾರ್ಟ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಈ ಮೊದಲು ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಇದೇ ಆಸ್ಪತ್ರೆಯಲ್ಲಿ ನೆರವೇರಿಸಲಾಗಿತ್ತು.</p>.<p>ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕಾರ ಪ್ರದಾನ ಮಾಡಲಾಗಿತ್ತು.</p>.<p>ಹವಾಮಾನ ಬದಲಾವಣೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ದೇಶಗಳ ನಡುವೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ‘ಇಂಟರ್ಗವರ್ನ್ಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್’ (ಐಪಿಸಿಸಿ) ಅಧ್ಯಕ್ಷರಾಗಿ ಪಚೌರಿ ಸೇವೆ ಸಲ್ಲಿಸುತ್ತಿದ್ದಾಗ 2007ರಲ್ಲಿ ಈ ಸಂಸ್ಥೆಗೆ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>