<p>ಭುವನೇಶ್ವರ: ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಇಲ್ಲಿ ನಿಧನರಾದರು. ಅವರಿಗೆ 79 ವರ್ಷವಾಗಿತ್ತು.</p>.<p>ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೇಥಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>ಭದ್ರಕ್ ಲೋಕಸಭೆ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 2000 ರಿಂದ 2004ವರೆಗೆ ಕೇಂದ್ರ ಜಲಸಂಪನ್ಮೂಲ ಸಚಿವರಾಗಿದ್ದರು.</p>.<p>ಮೃದುಭಾಷಿಯಾಗಿದ್ದ ಅವರು, ಯುವವಯಸ್ಸಿನಲ್ಲಿಯೇ ಸಾಮಾಜಿಕ ಸೇವೆ ಮತ್ತು ರಾಜಕೀಯ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಸಕ, ಸಂಸದರಾಗಿ ಸೇವಾ ಬದ್ಧತೆಯಿಂದ ಗಮನಸೆಳೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಭುವನೇಶ್ವರ: ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಇಲ್ಲಿ ನಿಧನರಾದರು. ಅವರಿಗೆ 79 ವರ್ಷವಾಗಿತ್ತು.</p>.<p>ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೇಥಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>ಭದ್ರಕ್ ಲೋಕಸಭೆ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 2000 ರಿಂದ 2004ವರೆಗೆ ಕೇಂದ್ರ ಜಲಸಂಪನ್ಮೂಲ ಸಚಿವರಾಗಿದ್ದರು.</p>.<p>ಮೃದುಭಾಷಿಯಾಗಿದ್ದ ಅವರು, ಯುವವಯಸ್ಸಿನಲ್ಲಿಯೇ ಸಾಮಾಜಿಕ ಸೇವೆ ಮತ್ತು ರಾಜಕೀಯ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಸಕ, ಸಂಸದರಾಗಿ ಸೇವಾ ಬದ್ಧತೆಯಿಂದ ಗಮನಸೆಳೆದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>