ಆದರೆ ಉದ್ಯೋಗ ನಷ್ಟ, ನಿರುದ್ಯೋಗ, ಭೂ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪಗಳು ಸ್ಥಳೀಯ ಮಟ್ಟದಲ್ಲಿ ಚರ್ಚೆಯ ವಿಷಯಗಳಾಗಿದ್ದವು. ಇದನ್ನು ಅರಿತುಕೊಳ್ಳದೆ, ಭಾವನಾತ್ಮಕ ವಿಷಯಗಳತ್ತ ಗಮನ ಹರಿಸಿದ್ದು ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.