ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯೊಳಗೆ ನುಸುಳಲು ಯತ್ನಿಸಿದ ಐವರು ಉಗ್ರರ ಹತ್ಯೆ

Last Updated 26 ಮೇ 2018, 6:10 IST
ಅಕ್ಷರ ಗಾತ್ರ

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಥಗ್‌ಧರ್‌ ವಲಯದ ಗಡಿಯಲ್ಲಿ ದೇಶದೊಳಗೆ ನುಸುಳಲು ಪ್ರಯತ್ನಿಸಿದ ಐವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಗಡಿಯೊಳಗೆ ಶನಿವಾರ ಬೆಳಿಗ್ಗೆ ನುಸುಳಲು ಯತ್ನಿಸಿದ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿ ನಡೆಸಿದ ಸೇನೆ, ಐವರು ಉಗ್ರರನ್ನು ಹತ್ಯೆಗೈದಿದೆ. ಗಡಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ರಾಜೇಶ್ ಕಾಲಿಯಾ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಶಸ್ತ್ರಸಜ್ಜಿತ ಉಗ್ರರು ನಡೆಸಲು ಯೋಜಿಸಿದ್ದ ದೊಡ್ಡ ಆಕ್ರಮಣವಿದು ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT