<p><strong>ನವದೆಹಲಿ:</strong> ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತೊಮ್ಮೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.</p>.<p>ಪಕ್ಷದ ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಆಯಾ ಪಕ್ಷಗಳ ಮುಖ್ಯಸ್ಥರೇ ಹೊಣೆ ಹೊರಬೇಕು ಎಂದು ತಾಕೀತು ಮಾಡಿದ್ದಾರೆ.</p>.<p>ಸೋಮವಾರ ಸಂಜೆ ನಡೆದ ಗುಪ್ತಚರ ವಿಭಾಗದ ವಾರ್ಷಿಕ ದತ್ತಿ ಉಪನ್ಯಾಸದ ವೇಳೆ ಅಧಿಕಾರಿಗಳ ಜತೆ ಸಂವಾದ ನಡೆಸಿದ ಗಡ್ಕರಿ ಅವರು ’ನಾನೇನಾದರೂ ಪಕ್ಷದ ಅಧ್ಯಕ್ಷನಾಗಿದ್ದು, ನಮ್ಮ ಪಕ್ಷದ ಶಾಸಕರು ಮತ್ತು ಸಂಸದರು ಸರಿಯಾಗಿ ಕೆಲಸ ಮಾಡದಿದ್ದರೆ ಅದರ ಹೊಣೆ ಹೊರುತ್ತಿದ್ದೆ’ ಎಂದಿದ್ದಾರೆ.</p>.<p>ಆ ಮೂಲಕ ಪಕ್ಷದ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮತ್ತೊಮ್ಮೆ ಗಡ್ಕರಿ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ಕಳೆದ ವಾರ ಪುಣೆಯಲ್ಲಿ ಮಾತನಾಡಿದ್ದ ಗಡ್ಕರಿ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಅತೃಪ್ತಿ ವ್ಯಕ್ತಪಡಿಸಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಗುರಿಯಾಗಿಟ್ಟುಕೊಂಡು ಗಡ್ಕರಿ ಈ ರೀತಿ ಹೇಳಿದ್ದಾರೆ ಎಂದು ಹೇಳಲಾಗಿತ್ತು.</p>.<p>ಇದನ್ನು ನಿರಾಕರಿಸಿದ್ದ ಅವರು ಮಾಧ್ಯಮದವರು ತಮ್ಮ ಹೇಳಿಕೆಯನ್ನು ತಿರುಚಿದ್ದಾರೆ. ಬಿಜೆಪಿ ನಾಯಕರಲ್ಲಿ ಒಡಕು ಮೂಡಿಸುವ ಷಡ್ಯಂತ್ರ ಎಂದು ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತೊಮ್ಮೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.</p>.<p>ಪಕ್ಷದ ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಆಯಾ ಪಕ್ಷಗಳ ಮುಖ್ಯಸ್ಥರೇ ಹೊಣೆ ಹೊರಬೇಕು ಎಂದು ತಾಕೀತು ಮಾಡಿದ್ದಾರೆ.</p>.<p>ಸೋಮವಾರ ಸಂಜೆ ನಡೆದ ಗುಪ್ತಚರ ವಿಭಾಗದ ವಾರ್ಷಿಕ ದತ್ತಿ ಉಪನ್ಯಾಸದ ವೇಳೆ ಅಧಿಕಾರಿಗಳ ಜತೆ ಸಂವಾದ ನಡೆಸಿದ ಗಡ್ಕರಿ ಅವರು ’ನಾನೇನಾದರೂ ಪಕ್ಷದ ಅಧ್ಯಕ್ಷನಾಗಿದ್ದು, ನಮ್ಮ ಪಕ್ಷದ ಶಾಸಕರು ಮತ್ತು ಸಂಸದರು ಸರಿಯಾಗಿ ಕೆಲಸ ಮಾಡದಿದ್ದರೆ ಅದರ ಹೊಣೆ ಹೊರುತ್ತಿದ್ದೆ’ ಎಂದಿದ್ದಾರೆ.</p>.<p>ಆ ಮೂಲಕ ಪಕ್ಷದ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮತ್ತೊಮ್ಮೆ ಗಡ್ಕರಿ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ಕಳೆದ ವಾರ ಪುಣೆಯಲ್ಲಿ ಮಾತನಾಡಿದ್ದ ಗಡ್ಕರಿ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಅತೃಪ್ತಿ ವ್ಯಕ್ತಪಡಿಸಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಗುರಿಯಾಗಿಟ್ಟುಕೊಂಡು ಗಡ್ಕರಿ ಈ ರೀತಿ ಹೇಳಿದ್ದಾರೆ ಎಂದು ಹೇಳಲಾಗಿತ್ತು.</p>.<p>ಇದನ್ನು ನಿರಾಕರಿಸಿದ್ದ ಅವರು ಮಾಧ್ಯಮದವರು ತಮ್ಮ ಹೇಳಿಕೆಯನ್ನು ತಿರುಚಿದ್ದಾರೆ. ಬಿಜೆಪಿ ನಾಯಕರಲ್ಲಿ ಒಡಕು ಮೂಡಿಸುವ ಷಡ್ಯಂತ್ರ ಎಂದು ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>