ವಿದೇಶಾಂಗ ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ, ಜೂನ್ 15ರ ರಾತ್ರಿ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಚೀನಾ ಪಡೆಗಳ ಪ್ರಚೋದನೆ ಬಳಿಕ ಸಂಘರ್ಷ ಆರಂಭವಾಯಿತು. ಉನ್ನತ ಮಟ್ಟದಲ್ಲಿ ಕೈಗೊಂಡಿದ್ದ ಒಪ್ಪಂದವನ್ನು ಚೀನಾ ಪಾಲಿಸಿದ್ದರೆ, ಹಿಂಸಾತ್ಮಕ ಮುಖಾಮುಖಿಯನ್ನು ತಡೆಯಬಹುದಿತ್ತು.ಸಂಘರ್ಷದ ವೇಳೆ ಎರಡೂ ಕಡೆ ಸಾವು–ನೋವು ಸಂಭವಿಸಿದೆ. ಇದೀಗ ಗಾಲ್ವನ್ ಕಣಿವಯಲ್ಲಿನ ವಾಸ್ತವ ನಿಯಂತ್ರಣ ರೇಖೆಯಿಂದ (ಎಲ್ಎಸಿ) ಚೀನಾ ಸೇನೆ ನಿರ್ಗಮಿಸಿದೆ ಎಂದು ಮಾಹಿತಿ ನೀಡಿದ್ದರು.