ಬಿಜೆಪಿ ಸಂಸದೀಯ ಪಕ್ಷದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಸಚಿವ ಪ್ರಹ್ಲಾದ ಜೋಶಿ,ಪಾದಯಾತ್ರೆಗಾಗಿ ಪ್ರತಿ ಲೋಕಸಭಾ ಕ್ಷೇತ್ರದಲ್ಲಿಯೂ 15–20 ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ಪ್ರತಿದಿನ 15 ಕಿ.ಮೀ. ಪಾದಯಾತ್ರೆ ನಡೆಸುತ್ತವೆ. ಸಂಸದರು ಮಹಾತ್ಮಾ ಗಾಂಧಿ ಅವರ ಜೀವನ ಸಾಧನೆ, ಸ್ವಾತಂತ್ರ್ಯ ಹೋರಾಟ, ಸಸಿ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಈ ಕಾರ್ಯಕ್ರಮಕ್ಕಾಗಿ ಪಕ್ಷದ ವತಿಯಿಂದಲೂ ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.