ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿಯನ್ನು ಕೊಂದ ನಾಥುರಾಮ್‌ ಗೋಡ್ಸೆ ದೇಶಭಕ್ತ ಎಂದ ಬಿಜೆಪಿ ಅಭ್ಯರ್ಥಿ ಸಾಧ್ವಿ

Last Updated 16 ಮೇ 2019, 11:55 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಹತ್ಯೆಗೈದ ನಾಥುರಾಂ ಗೋಡ್ಸೆ ಒಬ್ಬ ದೇಶಭಕ್ತ ಎಂದು ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಅವರು ಹೇಳಿದ್ದಾರೆ.

‘ಗೋಡ್ಸೆ ಭಾರತದ ಮೊದಲ ಹಿಂದೂ ಉಗ್ರಗಾಮಿ,’ ಎಂಬ ಬಹುಭಾಷಾ ನಟ ಕಮಲ್‌ ಹಾಸನ್‌ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿರುವ ಸಾಧ್ವಿ ಪ್ರಜ್ಞಾ ಸಿಂಗ್‌, ‘ಗೋಡ್ಸೆ ಒಬ್ಬ ದೇಶಭಕ್ತ. ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ. ಅವರನ್ನು ಉಗ್ರಗಾಮಿ ಎನ್ನುವವರು ಅವರ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಬೇಕು,’ ಎಂದು ಅವರು ಹೇಳಿಕೊಂಡಿದ್ದಾರೆ.

ಆದರೆ, ಈ ಹೇಳಿಕೆಯನ್ನು ಆಕ್ಷೇಪಿಸಿರುವ ಬಿಜೆಪಿಯ ವಕ್ತಾರ ಜಿ.ವಿ ಎಲ್‌ ನರಸಿಂಹರಾವ್‌, ‘ಸಾಧ್ವಿ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಪಕ್ಷ ಈ ಹೇಳಿಕೆಯನ್ನು ಖಂಡಿಸುತ್ತದೆ. ಈ ಬಗ್ಗೆ ಸ್ಪಷ್ಟನೆ ಕೇಳಲಾಗುತ್ತದೆ. ತಮ್ಮ ಹೇಳಿಕೆಗೆ ಸಾಧ್ವಿ ಅವರು ಬಹಿರಂಗವಾಗಿ ಕ್ಷಮೆ ಕೋರಬೇಕು,’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT