ನಾಲ್ಕು ವರ್ಷಗಳಲ್ಲಿ ನಾಲ್ಕು ಸಂಸ್ಥೆಗಳು ಮತ್ತು ಗಣ್ಯರೊಬ್ಬರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ (2015), ಅಕ್ಷಯ ಪಾತ್ರೆ ಪ್ರತಿಷ್ಠಾನ ಮತ್ತು ಸುಲಭ್ ಇಂಟರ್ನ್ಯಾಷನಲ್ ಸಂಸ್ಥೆ (2016), ಏಕಲ್ ಅಭಿಯಾನ್ ಟ್ರಸ್ಟ್ (2017) ಪ್ರತಿನಿಧಿಗಳು ಹಾಗೂ ಜಪಾನಿನ ಯೊಹೆ ಸಸಕಾವ (2018) ಅವರು ಪ್ರಶಸ್ತಿ ಸ್ವೀಕರಿಸಿದರು.