ನವದೆಹಲಿ: ಮಹಾತ್ಮಾಗಾಂಧೀಜಿ ಅವರ ಮೌಲ್ಯಗಳ ಬಗ್ಗೆ ಯುವಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ವಿಕಿಪೀಡಿಯಾ ಮಾದರಿಯಲ್ಲಿ ‘ಗಾಂಧಿಪೀಡಿಯಾ’ವನ್ನು ಅಭಿವೃದ್ಧಿಪಡಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದರು.
ಉನ್ನತ ಶಿಕ್ಷಣದಲ್ಲಿ ನೀತಿಯಲ್ಲಿ ಬದಲಾವಣೆ ತರುವ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ರೂಪಿಸಲಿದೆ ಎಂದು ಇದೇ ಸಂದರ್ಭ ಘೋಷಿಸಿದರು.