<p><strong>ಬೆಂಗಳೂರು:</strong> ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಾಣಸವಾಡಿ ಪೊಲೀಸರು, ಒಡಿಶಾದ ಏಳು ಮಂದಿಯನ್ನು ಬಂಧಿಸಿದ್ದಾರೆ.</p>.<p>ಸುಜಿತ್ಕುಮಾರ್, ಅರ್ಜುನ್ ಕೊಹರ್, ಅಜಿತ್, ರಾಘವ್ ಶಾಮಲ್, ವಿಕ್ರಂ ಕೊಹರ್, ಬೇದಭ್ಯಾಸ್ ಕೊಹರ್ ಹಾಗೂ ಅಜಿತ್ ಕೊಹರ್ ಬಂಧಿತರು. ಅವರಿಂದ ₹19.50 ಲಕ್ಷ ಮೌಲ್ಯದ 39 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.</p>.<p>ಗಾಂಜಾ ಮಾರಾಟ ಮಾಡಲೆಂದು ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ರಾಮಸ್ವಾಮಿಪಾಳ್ಯದ ಐ.ಒ.ಸಿ. ವೃತ್ತದ ಸೇತುವೆ ಬಳಿ ಬಂದು ಗ್ರಾಹಕರಿಗಾಗಿ ಕಾಯುತ್ತ ನಿಂತಿದ್ದರು. ಆ ಬಗ್ಗೆ ಮಾಹಿತಿ ಪಡೆದ ಬಾಣಸವಾಡಿ ಠಾಣೆಯ ಇನ್ಸ್ಪೆಕ್ಟರ್ ಆರ್. ವಿರೂಪಾಕ್ಷ<br />ಸ್ವಾಮಿ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<p>‘ಒಡಿಶಾದ ವ್ಯಕ್ತಿಯೊಬ್ಬರು ನೀಡಿದ್ದ ಗಾಂಜಾವನ್ನು ಕಮಿಷನ್ ಆಸೆಗಾಗಿ ಬೆಂಗಳೂರಿನಲ್ಲಿ ಮಾರಾಟ ಮಾಡಲು ಬಂದಿರುವುದಾಗಿ ಆರೋಪಿಗಳು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಗಾಂಜಾ ಕೊಟ್ಟು ಕಳುಹಿಸಿದ್ದ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ರೈಲಿನಲ್ಲಿ ಸಾಗಣೆ:</strong> ‘ಒಡಿಶಾದ ಜಮೀನುಗಳಲ್ಲಿ ಬೆಳೆದಿದ್ದ ಗಾಂಜಾವನ್ನು 15 ಪ್ಯಾಕ್ಗಳಲ್ಲಿ ತುಂಬಿಕೊಂಡಿದ್ದ ಆರೋಪಿಗಳು, ಭುವನೇಶ್ವರದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದರು. ಯಾರಿಗೂ ಅನುಮಾನ ಬಾರದಂತೆ ತಲಾ ಇಬ್ಬರು ಆರೋಪಿ, ಒಂದೊಂದು ಬೋಗಿಯಲ್ಲಿ ಕುಳಿತುಕೊಂಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ರೈಲು ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಬಸ್ಸಿನಲ್ಲಿರಾಮಸ್ವಾಮಿಪಾಳ್ಯಕ್ಕೆ ಬಂದಿದ್ದರು. ಆಗಲೇ ದಾಳಿ ಮಾಡಿ ಅವರನ್ನು ಬಂಧಿಸಲಾಯಿತು’ ಎಂದರು.</p>.<p>‘ನಗರದಲ್ಲಿರುವ ಕೆಲವು ಮಾರಾಟಗಾರರಿಗೆ ಒಡಿಶಾದಿಂದ ಗಾಂಜಾ ಪೂರೈಕೆ ಆಗುತ್ತಿರುವುದು ಬಂಧಿತ ಆರೋಪಿಗಳ ವಿಚಾರಣೆಯಿಂದ ಗೊತ್ತಾಗಿದೆ. ಆ ಬಗ್ಗೆ ಒಡಿಶಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಗರದಲ್ಲಿ ಮಾರಾಟ ಮಾಡುತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಾಣಸವಾಡಿ ಪೊಲೀಸರು, ಒಡಿಶಾದ ಏಳು ಮಂದಿಯನ್ನು ಬಂಧಿಸಿದ್ದಾರೆ.</p>.<p>ಸುಜಿತ್ಕುಮಾರ್, ಅರ್ಜುನ್ ಕೊಹರ್, ಅಜಿತ್, ರಾಘವ್ ಶಾಮಲ್, ವಿಕ್ರಂ ಕೊಹರ್, ಬೇದಭ್ಯಾಸ್ ಕೊಹರ್ ಹಾಗೂ ಅಜಿತ್ ಕೊಹರ್ ಬಂಧಿತರು. ಅವರಿಂದ ₹19.50 ಲಕ್ಷ ಮೌಲ್ಯದ 39 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.</p>.<p>ಗಾಂಜಾ ಮಾರಾಟ ಮಾಡಲೆಂದು ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ರಾಮಸ್ವಾಮಿಪಾಳ್ಯದ ಐ.ಒ.ಸಿ. ವೃತ್ತದ ಸೇತುವೆ ಬಳಿ ಬಂದು ಗ್ರಾಹಕರಿಗಾಗಿ ಕಾಯುತ್ತ ನಿಂತಿದ್ದರು. ಆ ಬಗ್ಗೆ ಮಾಹಿತಿ ಪಡೆದ ಬಾಣಸವಾಡಿ ಠಾಣೆಯ ಇನ್ಸ್ಪೆಕ್ಟರ್ ಆರ್. ವಿರೂಪಾಕ್ಷ<br />ಸ್ವಾಮಿ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<p>‘ಒಡಿಶಾದ ವ್ಯಕ್ತಿಯೊಬ್ಬರು ನೀಡಿದ್ದ ಗಾಂಜಾವನ್ನು ಕಮಿಷನ್ ಆಸೆಗಾಗಿ ಬೆಂಗಳೂರಿನಲ್ಲಿ ಮಾರಾಟ ಮಾಡಲು ಬಂದಿರುವುದಾಗಿ ಆರೋಪಿಗಳು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಗಾಂಜಾ ಕೊಟ್ಟು ಕಳುಹಿಸಿದ್ದ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ರೈಲಿನಲ್ಲಿ ಸಾಗಣೆ:</strong> ‘ಒಡಿಶಾದ ಜಮೀನುಗಳಲ್ಲಿ ಬೆಳೆದಿದ್ದ ಗಾಂಜಾವನ್ನು 15 ಪ್ಯಾಕ್ಗಳಲ್ಲಿ ತುಂಬಿಕೊಂಡಿದ್ದ ಆರೋಪಿಗಳು, ಭುವನೇಶ್ವರದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದರು. ಯಾರಿಗೂ ಅನುಮಾನ ಬಾರದಂತೆ ತಲಾ ಇಬ್ಬರು ಆರೋಪಿ, ಒಂದೊಂದು ಬೋಗಿಯಲ್ಲಿ ಕುಳಿತುಕೊಂಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ರೈಲು ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಬಸ್ಸಿನಲ್ಲಿರಾಮಸ್ವಾಮಿಪಾಳ್ಯಕ್ಕೆ ಬಂದಿದ್ದರು. ಆಗಲೇ ದಾಳಿ ಮಾಡಿ ಅವರನ್ನು ಬಂಧಿಸಲಾಯಿತು’ ಎಂದರು.</p>.<p>‘ನಗರದಲ್ಲಿರುವ ಕೆಲವು ಮಾರಾಟಗಾರರಿಗೆ ಒಡಿಶಾದಿಂದ ಗಾಂಜಾ ಪೂರೈಕೆ ಆಗುತ್ತಿರುವುದು ಬಂಧಿತ ಆರೋಪಿಗಳ ವಿಚಾರಣೆಯಿಂದ ಗೊತ್ತಾಗಿದೆ. ಆ ಬಗ್ಗೆ ಒಡಿಶಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಗರದಲ್ಲಿ ಮಾರಾಟ ಮಾಡುತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>